ಚಾಮರಾಜನಗರ : ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಚಾಮರಾಜನಗರ ತಾಲ್ಲೂಕಿನ ದೊಡ್ಡಮೂಡಹಳ್ಳಿ ಸಮೀಪ ನಡೆದಿದೆ.
ಮೂಲತಃ ತಮಿಳುನಾಡಿನ ಸತ್ಯ ಮಂಗಲಂ ನಿವಾಸಿ ಸುರೇಶ್ (45)ಸಾವನ್ನಪ್ಪಿದ ದುರ್ದೈವಿ. ಇವರು ವೃತ್ತಿಯಲ್ಲಿ ಕ್ಷೌರಿಕರಾಗಿದ್ದು ಶುಕ್ರವಾರ ರಾತ್ರಿ ಚಿಕ್ಕಮೂಡಹಳ್ಳಿ ಯಿಂದ ಪಡಿತರ ತರುವಾಗ ದಾರಿ ಮಧ್ಯೆ ಎದುರಾದ ಕಾಡಾನೆ ದಿಢೀರ್ ದಾಳಿ ನಡೆಸಿದೆ ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತ ಸುರೇಶ್ ಕಳೆದ 15 ವರ್ಷಗಳಿಂದ ತಮಿಳುನಾಡಿನ ಸತ್ಯಮಂಗಲಂ ಕಡೆಯಿಂದ ಆಗಮಿಸಿ ಸಂಬಂಧಿಕರ ಮನೆಯಲ್ಲೇ ಉಳಿದುಕೊಂಡು ಬೂದಿಪಡಗ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳಿಗೆ ಕ್ಷೌರ ಮಾಡುತ್ತಿದ್ದರು ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬಿ.ಆರ್. ಟಿ ಹುಲಿ ಸಂಕರಕ್ಷಿತ ಪ್ರದೇಶದ ಸಿಬ್ಬಂದಿ ಹಾಗೂ ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.