News Karnataka Kannada
Tuesday, May 07 2024
ಚಾಮರಾಜನಗರ

ಚಾಮರಾಜನಗರದಲ್ಲಿ ಗಾಳಿ ಸಹಿತ ಸುರಿದ ಮಳೆಗೆ ಬೆಳೆ ನಾಶ

Chamaraj
Photo Credit :

ಚಾಮರಾಜನಗರ: ಬಿಸಿಲಿನ ಝಳಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ, ಆದರೆ ಗಾಳಿ ಸಹಿತ ಸುರಿದ ಮಳೆಗೆ ಜೋಳದ ಬೆಳೆ ನೆಲಕಚ್ಚಿದ್ದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ರೈತರದ್ದಾಗಿದೆ.

ಜಿಲ್ಲೆಯ ಹನೂರು ತಾಲ್ಲೂಕಿನ ಅಜ್ಜೀಪುರ ಸಮೀಪದ ಗಂಗನದೊಡ್ಡಿ ಗ್ರಾಮದಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಗ್ರಾಮದ ಶ್ರೀಕಂಠರಾದ್ಯ ರವರಿಗೆ ಸೇರಿದ ಜೋಳದ ಬೆಳೆ ಸಂಪೂರ್ಣ ನೆಲಕಚ್ಚಿದೆ. ಇದರಿಂದಾಗಿ ರೈತ ಶ್ರೀಕಂಠರಾದ್ಯ ಕಂಗಲಾಗಿದ್ದಾರೆ. ಇನ್ನೊಂದೆಡೆ ವೆಂಕಟೇಶ್, ಪಾಪಣ್ಣ, ಅಮ್ಜದ್ ಖಾನ್ ಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಬಾಳೆಯೂ ಗಾಳಿಗೆ ಮುರಿದು ಬಿದ್ದಿದೆ.

ಈ ವ್ಯಾಪ್ತಿಯಲ್ಲಿ ಸಿಡಿಲು, ಗಾಳಿ ಸಹಿತ ಮಳೆ ಸುರಿದಿದ್ದು,  ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿತ ಘಟನೆ ನಡೆದಿದ್ದು, ಮನೆಯಲ್ಲಿದ್ದರಿಗೆ ಗಾಯವಾಗಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೆಲ್ಲದರ ನಡುವೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಂತ್ತಿರುವ ತಮಿಳುನಾಡಿನ ತಾಳವಾಡಿ ಸುತ್ತ ಮುತ್ತ ಭಾರಿಮಳೆಯಾಗಿದ್ದು, ಬಿಸಿಲಿನ ತಾಪಮಾನಕ್ಕೆ ಬೆಂಡಾಗಿ ಹೋಗಿದ್ದ ತಾಳವಾಡಿ ಜನತೆಯ ಮುಖದಲ್ಲಿ ಮಂದಹಾಸ ಮೂಡಿದೆ. ತಾಳವಾಡಿ ಸೂಸಯ್ಯಪುರಂ ಡಿಕಿನರೈ, ಕರಲವಾಡಿ ಸೇರಿದಂತೆ ಹಲವಾರು ಕಡೆ ಭಾರಿ ಮಳೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು