ಚಾಮರಾಜನಗರದಲ್ಲಿ ರಾಷ್ಟ್ರಪತಿಗಳಿಂದ ಬೋಧನಾ ಆಸ್ಪತ್ರೆ ಲೋಕಾರ್ಪಣೆ

ಮೈಸೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಮಿತ್ತ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಚಾಮರಾಜನಗರದಲ್ಲಿ ನಡೆಯಲಿರುವ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಆ ಸಂಬಂಧ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದರು..

ಬೆಂಗಳೂರಿನಿಂದ ಮೈಸೂರು ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿ ಬರಮಾಡಿಕೊಂಡರು.

ಈ ವೇಳೆ ಅವರೊಂದಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಎಸ್.ಟಿ.ಸೋಮಶೇಖರ್ ಇದ್ದರು. ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳು ಬಳಿಕ ಚಾಮರಾಜನಗರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.

ನೇರವಾಗಿ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳಿ ಬಿಳಿಗಿರಿರಂಗನಾಥ ದರ್ಶನ ಪಡೆದ ಬಳಿಕ ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಚಾಮರಾಜನಗರ ಹೊರ ವಲಯದಲ್ಲಿ ನಿರ್ಮಾಣವಾಗಿರುವ ಮೆಡಿಕಲ್ ಕಾಲೇಜು ಹೈಟೆಕ್ ಬೋಧನಾ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ವೇಳೆ ಚಾಮರಾಜನಗರದ ಮೆಡಿಕಲ್ ಕಾಲೇಜು ಬಳಿ ನಿರ್ಮಾಣವಾಗಿರುವ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ರವರು ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲಿದ್ದಾರೆ.

ಮಧ್ಯಾಹ್ನ 1.30 ಕ್ಕೆ ಮೆಡಿಕಲ್ ಕಾಲೇಜು ಸಮೀಪದ ಹೆಲಿಪ್ಯಾಡ್ ಗೆ ಆಗಮಿಸುವ ರಾಷ್ಟ್ರಪತಿಗಳು ಕಾಲೇಜಿನಲ್ಲಿ ಬೋಜನದ ಬಳಿಕ ವಿಶ್ರಾಂತಿ ಪಡೆದ ಬಳಿಕ ಮಧ್ಯಾಹ್ನ 3.30ಕ್ಕೆ ಮೆಡಿಕಲ್ ಕಾಲೇಜಿನ ಭೋಧನಾ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಚಾಮರಾಜನಗರಕ್ಕೆ ಆಗಮಿಸೋ ಹಿನ್ನೆಲೆ ನಗರದಲ್ಲಿ ಗುಂಡಿ ಬಿದ್ದಿದ್ದ ರಸ್ತೆಗಳೆಲ್ಲವೂ ಡಾಂಬರ್ ಮಯವಾಗಿವೆ. ಡಿವೈಡರ್ಗಳಿಗೆ ಬಣ್ಣ ಬಳೆಯೋದರ ಜೊತೆಗೆ ನಗರವೇ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

Raksha Deshpande

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

1 hour ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

1 hour ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago