News Karnataka Kannada
Friday, May 17 2024
ಚಾಮರಾಜನಗರ

ಚಾಮರಾಜನಗರದಲ್ಲಿ 1,650ಕ್ಕೆ ಇಳಿದ ಕೋವಿಡ್‌ ಸಕ್ರಿಯ ಪ್ರಕರಣ

Photo Credit : News Kannada

ಚಾಮರಾಜನಗರ: ಭಾನುವಾರ ಜಿಲ್ಲೆಯಲ್ಲಿ 356 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಸಾವು ಸಂಭವಿಸಿಲ್ಲ,ಸಕ್ರಿಯ ಪ್ರಕರಣಗಳ ಸಂಖ್ಯೆ 1,650ಕ್ಕೆ ಇಳಿಕೆಯಾಗಿದೆ.

ಭಾನುವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಕೋವಿಡ್‌ ಪ್ರಕರಣಗಳ ಸಂಖ್ಯೆ 42,301ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 40 ಸಾವಿರ ದಾಟಿದೆ. ಈವರೆಗೆ 40,097 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ ಯೇತರ ಕಾರಣಗಳಿಂದ 595 ಮಂದಿ ಪ್ರಾಣಕಳೆದುಕೊಂಡಿದ್ದಾರೆ.

ಸೋಂಕಿತರ ಪೈಕಿ ಏಳು ಮಂದಿ ಐಸಿಯುನಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. 1,565 ಸೋಂಕಿತರು ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆಗೆ ಹಾಗೂ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿದ್ದಾರೆ.

ಸೋಂಕು ದೃಢಪಟ್ಟ 194 ಮಂದಿಯಲ್ಲಿ 21 ಮಕ್ಕಳಿದ್ದಾರೆ.ಚಾಮರಾಜನಗರ ತಾಲ್ಲೂಕಿನಲ್ಲಿ 64, ಗುಂಡ್ಲುಪೇಟೆಯಲ್ಲಿ 60, ಹನೂರಿನಲ್ಲಿ 35, ಕೊಳ್ಳೇಗಾಲದಲ್ಲಿ 21 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 14 ಪ್ರಕರಣಗಳು ದೃಢಪಟ್ಟಿವೆ.

ಗುಣಮುಖರಾದ 356 ಜನರಲ್ಲಿ ಚಾಮರಾಜನಗರ ತಾಲ್ಲೂಕಿನ 131, ಗುಂಡ್ಲುಪೇಟೆಯ 115, ಹನೂರಿನ 59, ಕೊಳ್ಳೇಗಾಲದ 33 ಹಾಗೂ ಯಳಂದೂರು ತಾಲ್ಲೂಕಿನ 18 ಮಂದಿ ಸೇರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು