News Karnataka Kannada
Monday, April 29 2024
ಚಾಮರಾಜನಗರ

ಚಾಮರಾಜನಗರದ ಚೆಕ್ ಪೋಸ್ಟ್ ಗಳಲ್ಲಿ ಕಠಿಣ ತಪಾಸಣೆ

Chamarajnagara
Photo Credit :

ಚಾಮರಾಜನಗರ: ರಾಜ್ಯದಲ್ಲಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳ ಮತ್ತು ತಮಿಳು ನಾಡಿನ ಗಡಿಯನ್ನು ಹಂಚಿಕೊಂಡಿರುವ ಚಾಮರಾಜನಗರದಲ್ಲಿ ಎಚ್ಚರಿಕೆಯನ್ನು ವಹಿಸಲಾಗಿದ್ದು, ತಮಿಳುನಾಡು ಮತ್ತು ಕೇರಳದಿಂದ ಬರುವ ವಾಹನಗಳನ್ನು ಚೆಕ್ ಪೋಸ್ಟ್ ಗಳಲ್ಲಿ ತಡೆದು ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದ ಮೂಲೆ ಹೊಳೆ ಚೆಕ್ ಪೋಸ್ಟ್ ನಲ್ಲಿ ಕಠಿಣ ತಪಾಸಣೆಯನ್ನು ನಡೆಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದು, ಕೇರಳದಿಂದ ಬರುವ ಎಲ್ಲ ವಾಹನಗಳನ್ನು ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ತಪಾಸಣೆ ಚುರುಕುಗೊಳಿಸಿದ್ದಾರೆ.

ತರಕಾರಿ ಹಾಗೂ ಇನ್ನಿತರ ಸರಕು ಸಾಗಾಣಿಕೆ ವಾಹನಗಳ ಚಾಲಕರು ಕಡ್ಡಾಯವಾಗಿ 72 ಗಂಟೆಯ ಮುನ್ನಾ ಆರ್ ಟಿ ಪಿ ಸಿ ಆರ್ ನೆಗಟಿವ್ ರಿಪೋರ್ಟ್ ಹೊಂದಿರಬೇಕು ಹಾಗೂ ಎರಡು ಡೋಸ್ ಲಸಿಕೆ ಹಾಕಿರಬೇಕು. ಇಲ್ಲದಿದ್ದರೆ ಕೇರಳದಿಂದ ಕರ್ನಾಟಕದೊಳಗೆ ಬರುವಂತಿಲ್ಲ ಎಂದು ತಪಾಸಣಾ ಸಿಬ್ಬಂದಿ  ಕಟ್ಟಪ್ಪಣೆ ಮಾಡುತ್ತಿದ್ದಾರೆ. ಒಟ್ಟಾರೆ ಚಾಮರಾಜನಗರದಲ್ಲಿ ಕಠಿಣ ತಪಾಸಣೆ ಮಾಡುತ್ತಿರುವುದರಿಂದ ಹೊರಗಿನಿಂದ ಬರುವವರಿಂದ ಸೋಂಕು ಬರಬಹುದು ಎಂಬ ಜನರ ಆತಂಕ ದೂರವಾದಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು