News Karnataka Kannada
Monday, April 29 2024
ಚಾಮರಾಜನಗರ

ಚಾಮರಾಜನಗರದ ಚೆಕ್ ಪೋಸ್ಟ್ ಸಿಬ್ಬಂದಿಗೆ ನೊಟೀಸ್

Checkpost
Photo Credit :

ಚಾಮರಾಜನಗರ: ಜಿಲ್ಲೆಯ ಗಡಿಭಾಗದ ಚೆಕ್ ಪೋಸ್ಟ್ ನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಕರ್ತವ್ಯ ಲೋಪ ಎಸಗಿದ ಆರೋಪದಡಿ ನಾಲ್ಕು ಮಂದಿ ಸಿಬ್ಬಂದಿಗಳಿಗೆ ಜಿಲ್ಲಾಡಳಿತ ನೋಟೀಸ್  ಜಾರಿ ಮಾಡಿದೆ.

ಕಳೆದ ಕೆಲವು ದಿನಗಳ ಹಿಂದೆ ನಾಲ್ಕು ದಿನಗಳ ಹಿಂದೆ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಕೋವಿಡ್ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದ ಬಗ್ಗೆ ಪ್ರಮಾಣ ಪತ್ರವನ್ನು ಸಮರ್ಪಕವಾಗಿ ಪರಿಶೀಲಿಸುತ್ತಿಲ್ಲ. ಜತೆಗೆ ಪ್ರಮಾಣ ಪತ್ರ  ಇಲ್ಲದವರನ್ನು ಬಿಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.

ಹೀಗಾಗಿ ಜಿಲ್ಲಾಡಳಿತ ಪರಿಶೀಲನೆ ನಡೆಸಿ  ಕರ್ತವ್ಯಲೋಪದ ಆಧಾರದ ಮೇಲೆ ನಾಲ್ಕು ಮಂದಿ ಸಿಬ್ಬಂದಿಗಳಿಗೆ ನೋಟೀಸ್ ಜಾರಿ ಮಾಡಿತ್ತು ಇದಾದ ಬಳಿಕ ಎಚ್ಚೆತ್ತುಕೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿ ಕಠಿಣ ಕ್ರಮವನ್ನ ಕೈಗೊಂಡಿದ್ದಾರೆ.

ಕೇರಳವನ್ನು ಸಂಪರ್ಕಿಸುವ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಬರುವ ಅಂತರಾಜ್ಯ ವಾಹನಗಳನ್ನ ಪರಿಶೀಲನೆಗೆ ಒಳಪಡಿಸುತ್ತಿದ್ದು ಆರ್ ಟಿಫಿಸಿಆರ್ ವರದಿ ಇದ್ದರೆ ಮಾತ್ರ ಪ್ರವೇಶ ಜಿಲ್ಲೆಯೊಳಗೆ ಪ್ರವೇಶ ನೀಡಲಾಗುತ್ತಿದೆ. ಜತೆಗೆ ರಾಜ್ಯದ ಶಬರಿಮಲೆ ಯಾತ್ರಾರ್ಥಿಗಳಿಗೂ ಕೂಡ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ಕೊರೊನಾ ನೆಗೆಟಿವ್ ರಿಪೋರ್ಟ್ ಇಲ್ಲದವರನ್ನು ವಾಪಸ್ ಕಳುಹಿಸಲಾಗುತ್ತಿದೆ. ಒಟ್ಟಾರೆ ಕಠಿಣ ಕ್ರಮಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು