ಚಾಮರಾಜನಗರ : ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ಆರ್. ರ” ಅವರನ್ನು ರಾಜ್ಯ ಸರ್ಕಾರ ಯಾವುದೇ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅವರನ್ನು ನಿಯೋಜನೆ ಮಾಡಿದ್ದು, ಅಧಿಕಾರ ಸ್ವೀಕರಿಸಿದ್ದಾರೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ಆರ್. ರ”, ಜಿಲ್ಲೆಯ ಮಾಂಬಳ್ಳಿಯವರಾಗಿದ್ದು, ಪ್ರಸ್ತುತ “ವಿಧಾನ ಪರಿಷತ್ ಚುನಾವಣೆ ಇರುವ “ನ್ನಲೆಯಲ್ಲಿ ರಾಜ್ಯ ಸರ್ಕಾರ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಇವರಿಗೆ ಯಾವುದೇ ಸ್ಥಳ ನಿಯೋಜನೆಯನ್ನು ಮಾಡಿಲ್ಲ.
ಮೇ.2 ರಂದು ರಾತ್ರಿ ಚಾಮರಾಜನಗರ ಜಿಲ್ಲಾ ಕೋ”ಡ್ ಆಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಎರಡು ಭಾರಿ ವರ್ಗಾವಣೆಯಾಗಿದ್ದರೂ ಸಹ ಸರ್ಕಾರದ ಮೇಲೆ ರಾಜಕಾರಣಿಗಳ ಮೂಲಕ ಪ್ರಭಾವ ಬೀರಿ ಇಲ್ಲಿಯೇ ಮುಂದುವರೆದಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್.ರ”ರವರನ್ನು ವರ್ಗಾವಣೆ ಮಾಡುವಂತೆ ಹಲವಾರು ಸಂಘಟನೆಗಳು ಮತ್ತು ಆಕ್ಸಿಜನ್ ದುರಂತದಲ್ಲಿ ಮಡಿದವರ ಕುಟುಂಬಸ್ಥರು ಒತ್ತಾಯ ಮಾಡುತ್ತಲೇ ಬಂದಿದ್ದರು. ಕೊನೆಗೂ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ನೀಡಿದೆ.
ನೂತನ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೋಮವಾರ ಜಿಲ್ಲಾಧಿಕಾರಿ ಡಾ.ಎಂ.ಆರ್. ರ” ಅವರಿಂದ ಅಧಿಕಾರ ಸ್ವೀಕರಿಸಿದರು.