ಚಾಮರಾಜನಗರ: ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಸಾಯಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಕಲ್ಲಹಳ್ಳಿ ಮಹೇಶ್ ಅವರ ಹಸು ಚಿರತೆ ದಾಳಿಗೆ ಬಲಿಯಾಗಿದ್ದು, ಜಮೀನಿನಲ್ಲಿ ಮೇಯುತಿದ್ದ ಸಂದರ್ಭ ಚಿರತೆ ದಾಳಿ ನಡೆಸಿರುವುದರಿಂದ ಗ್ರಾಮದಲ್ಲಿ ರೈತರು ಆತಂಕಗೊಂಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ರೈತ ಮಹೇಶ್ ಅವರು, ಚಿರತೆ ಹಾವಳಿ ನಮ್ಮ ಭಾಗದಲ್ಲಿ ಹೆಚ್ಚಿದ್ದು ಕೆಲವು ತಿಂಗಳ ಹಿಂದೆಯೂ ನಮ್ಮ ಮತ್ತೊಂದು ಹಸುವನ್ನು ಚಿರತೆ ಕೊಂದು ಹಾಕಿತ್ತು. ನಮ್ಮೂರಿನ ಕೆಲವರ ಕುರಿ, ಮೇಕೆಗಳ ಮೇಲು ದಾಳಿ ಮಾಡಿ ಹೊತ್ತೊಯ್ದಿದೆ.
ಅರಣ್ಯ ಇಲಾಖೆ ಚಿರತೆಯನ್ನು ಕೂಡಲೇ ಸೆರೆ ಹಿಡಿಯಬೇಕು. ಅರ್ಥಿಕವಾಗಿ ಹಿಂದುಳಿದ ಅದೆಷ್ಟೋ ಬಡ ರೈತರು ನಮ್ಮೂರಲ್ಲಿದ್ದು ನಮ್ಮ ಹಸುವಿನ ಮೇಲೆ ದಾಳಿ ಮಾಡಿ ಕೊಂದಿರುವುದರಿಂದ ತುತ್ತು ಅನ್ನಕ್ಕೂ ಪರಿತಪಿಸುವ ಪರಿಸ್ಥಿತಿ ಬಂದೊದಗಿದೆ. ಆದ್ದರಿಂದ ಕೂಡಲೇ ಅರಣ್ಯ ಇಲಾಖೆ ಚಿರತೆ ಸಿರೆಹಿಡಿಯಬೇಕು ಎಂದು ಮಹೇಶ್ ಒತ್ತಾಯಿಸಿದ್ದಾರೆ.