ಚಾಮರಾಜನಗರ : ತೇರು ಎಳೆಯುವಾಗ ನೂಕು ನುಗ್ಗಲು ಉಂಟಾಗಿ ರಥದ ಚಕ್ರ ಹರಿದು ಓರ್ವ ಮೃತಪಟ್ಟಿದ್ರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮ ಸಮೀಪದ ಪಾರ್ವತಿ ಬೆಟ್ಟದಲ್ಲಿ ಸಂಭವಿಸಿದೆ.
ಪಾರ್ವಾತಾಂಭ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಕಂದೇಗಾಲ ಗ್ರಾಮದ ಆಕಾಶ್ @ಸರ್ಪ(27) ಮೃತರು.
ಜಾತ್ರೆಯಲ್ಲಿ ರಥ ಹರಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ
ಸ್ವಾಮಿ(40) ಹಾಗೂ ಕೊಡಸೋಗೆ ಗ್ರಾಮದ ಕರಿನಾಯ್ಕ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ನಡೆದ ಜಾತ್ರೆಯಲ್ಲಿ ರಥವು 100 ಮೀಟರ್ ಚಲಿಸುತ್ತಿದ್ದಾಗಲೇ ನೂಕುನುಗ್ಗಲು ಉಂಟಾಗಿ ಈ ಮೂವರು ರಥದ ಚಕ್ರಕ್ಕೆ ಸಿಲುಕಿದರು ಎನ್ನಲಾಗ್ತಿದೆ.
ಈ ಮೂವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಓರ್ವ ಮೃತಪಟ್ಟಿದ್ದಾರೆ. ಗಾಯಗೊಂಡವರ ಕಾಲು, ತೊಡೆ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸ್ ಬಂದೋಬಸ್ತ್ ವಿಫಲವಾಗಿರುವ ಆರೋಪವೂ ಕೇಳಿ ಬಂದಿದೆ.