News Karnataka Kannada
Saturday, May 04 2024
ಚಾಮರಾಜನಗರ

ಜಿಂಕೆಗೆ ತಿಂಡಿ ತಿನ್ನಿಸಿದ ಆರೋಪ: ವರದಿಗಾರನಿಗೆ ದಂಡ

Jinke Gundlupete 05082021
Photo Credit :

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ನಿಲ್ಲಿಸಬಾರದು ಮತ್ತು ವನ್ಯ ಪ್ರಾಣಿಗಳಿಗೆ ಯಾವುದೇ ತಿನಿಸುಗಳನ್ನು ನೀಡಬಾರದು ಎಂಬ ನಿರ್ಬಂಧವಿದ್ದರೂ ಅದನ್ನು ಉಲ್ಲಂಘಿಸಿದ ದೆಹಲಿಯ ವರದಿಗಾರನಿಗೆ ದಂಡ ವಿಧಿಸಲಾಗಿದೆ.

ದೆಹಲಿಯ ವರದಿಗಾರ ವಾಖ್ಹರ್ ಅಹಮದ್ ಎಂಬಾತನೇ ಜಿಂಕೆಗೆ ರಾಷ್ಟ್ರೀಯ ಹೆದ್ದಾರಿ ನಡುವೆ ತಿಂಡಿ ತಿನಿಸಿ ದಂಡ ತೆತ್ತವನು. ಈತ ಬುಧವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಬಂಡೀಪುರ ದಿಂದ ಊಟಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಯ ಬಂಡೀಪುರ ವಲಯಕ್ಕೆ ಸೇರುವ ರಸ್ತೆಯಲ್ಲಿ ಜಿಂಕೆಗೆ ತಿಂಡಿ ತಿನಿಸಿದ್ದಾನೆ. ಇದೇ ವೇಳೆ ಟ್ಯಾಕ್ಸಿ ಯಲ್ಲಿ ಪ್ರಯಾಣಿಸುತ್ತಿದ್ದ ಪ್ರವಾಸಿಗರೊಬ್ಬರು ಆ ದೃಶ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದಾರೆ.

ಇದು ವೈರಲ್ ಆಗಿದ್ದು ಬಂಡೀಪುರ ಅರಣ್ಯಾಧಿಕಾರಿಗಳ ಗಮನಕ್ಕೆ ಬಂದಿದೆ.

ಕೂಡಲೇ ಎಚ್ಚೆತ್ತುಕೊಂಡ ಅರಣ್ಯಾಧಿಕಾರಿಗಳು ಜಿಂಕೆಗೆ ತಿಂಡಿ ತಿನಿಸಿದ ಕಾರು ಕೆಎ 3 ಎಜಿ 9602ನ್ನು ಬೆನ್ನತ್ತಿದ್ದು, ಕೊನೆಗೂ ಆತನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ನಡೆಸಿದ ವೇಳೆ ಆತನ ಹೆಸರು ವಾಖ್ಹರ್ ಅಹಮದ್, ಎನ್ ಡಿ ಟಿವಿ ನವದೆಹಲಿಯ ವರದಿಗಾರ ಎಂಬುದು ತಿಳಿದು ಬಂದಿದ್ದು, ದಂಡ ಕಟ್ಟಿಸಿಕೊಂಡು, ಎಚ್ಚರಿಕೆ ನೀಡಿ ಕಳುಹಿಸಿಕೊಟ್ಟಿದ್ದಾರೆ. ಈ ವಿಚಾರವನ್ನು ಗುಂಡ್ಲುಪೇಟೆ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ ಅವರು ದೃಢಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು