ಚಾಮರಾಜನಗರ: ಕೌಟಂಬಿಕ ಕಲಹದಿಂದ ಬೇಸತ್ತ ಮಗ ತಂದೆಗೆ ಚಾಕು ಇರಿದ ಘಟನೆ ಚಾಮರಾಜನಗರ ತಾಲ್ಲೂಕಿನ ಹೊಂಗನೂರಿನಲ್ಲಿ ನಡೆದಿದ್ದು ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಹೊಂಗನೂರು ಗ್ರಾಮದ ರಂಗನಾಯಕ ಎಂಬುವರು ಮಗನಿಂದ ಚಾಕು ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಮಗ ಮುರುಗೇಶ್ ಎಂಬಾತನನ್ನು ಬಂಧಿಸಲಾಗಿದೆ.
ರಂಗನಾಯಕ ಮತ್ತು ಮಗ ಮುರುಗೇಶ್ ಅವರ ನಡುವೆ ಕಳೆದ ಕೆಲವು ದಿನಗಳ ಹಿಂದಿನಿಂದಲೂ ಕೌಟಂಬಿಕ ವಿಚಾರವಾಗಿ ಗಲಾಟೆ ನಡೆಯುತ್ತಿತ್ತು. ಇದರಿಂದ ಬೇಸತ್ತ ಮುರುಗೇಶ್ ಕೋಪದಲ್ಲಿ ಚಾಕುವಿನಿಂದ ತಂದೆ ರಂಗನಾಯಕನಿಗೆ ಇರಿದಿದ್ದಾನೆ. ಕೂಡಲೇ ಗಾಯಾಳು ರಂಗನಾಯಕನನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲು ಮಾಡಿದ್ದು, ಆರೋಪಿ ಮುರುಗೇಶನನ್ನು ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯವರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.