ಚಾಮರಾಜನಗರ: ಕೇಂದ್ರ ಸರ್ಕಾರ ರೂಪಿಸಿರುವ ಎಪಿಎಂಸಿ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಪಂಜಾಬ್, ಹರಿಯಾಣದ ಮಧ್ಯವರ್ತಿಗಳೇ ವಿನಾ ರೈತರಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಕೂಡ ರಾಜಕೀಯ ಪ್ರೇರಿತ. ಪ್ರತಿಭಟನಕಾರ ಆರೋಪಗಳಲ್ಲಿ ಹುರುಳಿಲ್ಲ’ ಎಂದರು.
ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಹೋರಾಟ ಮಾಡುತ್ತಿರುವವರು ರೈತರಲ್ಲ. ಪಂಜಾಬ್, ಹರಿಯಾಣಗಳ ಎಪಿಎಂಸಿಯ ಮಧ್ಯವರ್ತಿಗಳು. ಎಪಿಎಂಸಿಯಲ್ಲಿ ರೈತರ ಉತ್ಪನ್ನಗಳಿಂದ ಅವರಿಗೆ ಕಮಿಷನ್ ಹೋಗುತ್ತಿತ್ತು. ಸರ್ಕಾರ ಎಪಿಎಂಸಿ ಕಾಯ್ದೆ ಜಾರಿಗೆ ತಂದ ನಂತರ ರೈತರೇ ನೇರವಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ಆರಂಭಿಸಿದರು. ಮಧ್ಯವರ್ತಿಗಳ ಲಾಬಿ ಪ್ರತಿಭಟನೆಯ ಹಿಂದೆ ಇದೆ’ ಎಂದರು.ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದ್ದಕ್ಕೆ, ‘ರಾಜ್ಯ ಸರ್ಕಾರ ಈಗಾಗಲೇ ಪರಿಹಾರ ನೀಡಿದೆ’ ಎಂದಷ್ಟೇ ಹೇಳಿದರು.
ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ ಮದ್ಯವರ್ತಿಗಳು ; ಸಚಿವೆ ಶೋಭಾ ಕರಂದ್ಲಾಜೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.