ಚಾಮರಾಜನಗರ: ವಿಚಾರಣೆಗಾಗಿ ಬುಧವಾರ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದ ನಗರಸಭಾ ಸದಸ್ಯರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಗಾಳಿಪುರ ಬಡಾವಣೆಯ ಅಹಮದ್ ಮೊಹಲ್ಲಾ ನಿವಾಸಿ, ನಗರಸಭೆಯ 6ನೇ ವಾರ್ಡ್ ಸದಸ್ಯ ಸಮೀವುಲ್ಲಾ ಖಾನ್ (45) ಎಂದು ಗುರುತಿಸಲಾಗಿದೆ.
ಮೂರು ವರ್ಷಗಳ ಹಿಂದೆ, ಬಾಬರಿ ಮಸೀದಿ ಧ್ವಂಸ ಪ್ರಕರಣದ ವರ್ಷಾಚರಣೆ ದಿನ (ಡಿ.6) ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿರುವ ಸಂಬಂಧ ಸಮೀವುಲ್ಲಾ ಸೇರಿದಂತೆ 106 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆಗಾಗಿ ಸಮೀವುಲ್ಲಾ ಖಾನ್ ಹಾಗೂ ಇತರರು ನ್ಯಾಯಾಲಯಕ್ಕೆ ಬಂದಿದ್ದರು.