News Karnataka Kannada
Monday, April 29 2024
ಚಾಮರಾಜನಗರ

ಫಾರೆಸ್ಟ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

Wild Elephant
Photo Credit :

ಚಾಮರಾಜನಗರ: ಅರಣ್ಯದಿಂದ ನಾಡಿಗೆ ಬಂದು ರೈತರ ಮೇಲೆ ದಾಳಿ ಮಾಡುತ್ತಿದ್ದ ಕಾಡಾನೆಗಳು ಇದೀಗ ಅರಣ್ಯದಲ್ಲಿ ಅರಣ್ಯ ಸಿಬ್ಬಂದಿ ಮೇಲೆಯೇ ದಾಳಿ ಮಾಡುತ್ತಿವೆ. ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಪ್ರಕರಣ ಮೇಲಿನಿಂದ ಮೇಲೆ ನಡೆಯುತ್ತಿದ್ದು ಭಯ ಪಡುವಂತಾಗಿದೆ.

ಈ ನಡುವೆ ಬಿಳಿಗಿರಿರಂಗನ ಬೆಟ್ಟ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಫಾರೆಸ್ಟ್‌ ವಾಚರ್  ಜಡೆಯಾ(58)  ಎಂಬುವರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ.

ಫಾರೆಸ್ಟ್ ವಾಚರ್ ಜಡೆಯಾ ಅವರು ಇನ್ನಿಬ್ಬರು ಸಿಬ್ಬಂದಿಯೊಂದಿಗೆ ಅರಣ್ಯದಲ್ಲಿ ಗಸ್ತು ತೆರಳುತ್ತಿದ್ದರು ಈ ವೇಳೆ ಪುಣಜನೂರು ಅರಣ್ಯ ವಲಯದ ಕರಿಕಲ್ಲು ಮುಂಟಿ ಎಂಬಲ್ಲಿ ದಿಢೀರ್ ಪ್ರತ್ಯಕ್ಷವಾದ ಕಾಡಾನೆ ಜಡೆಯಾ ಮೇಲೆ ದಾಳಿ ಮಾಡಿದೆ. ಈ ಸಂದರ್ಭ ಜತೆಗಿದ್ದ ಇನ್ನಿಬ್ಬರು ಓಡಿ ತಪ್ಪಿಸಿಕೊಂಡಿದ್ದಾರೆ. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಜಡೆಯಾನನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು