ಚಾಮರಾಜನಗರ: ಫ್ಲೆಕ್ಸ್ ತೆರವು ವಿಚಾರಕ್ಕೆ ಎರಡು ಜನಾಂಗದ ನಡುವೆ ಗಲಾಟೆ ನಡೆದು ಗ್ರಾಮದಲ್ಲಿ ಉದ್ರಿಕ್ತ ಪರಿಸ್ಥಿತಿ ಉಂಟಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಆಲತ್ತೂರು ಗ್ರಾಮದಲ್ಲಿ ಮೂರು ದಿನದ ಹಿಂದೆ ವೀರಶೈವ ಜನಾಂಗದಿಂದ ಬಸವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗಿತ್ತು. ಕಾರ್ಯಕ್ರಮಕ್ಕಾಗಿ ಗ್ರಾಮದಲ್ಲಿ ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಆದರೆ ವೀರಶೈವ ಲಿಂಗಾಯತ ಬೀದಿಯಲ್ಲಿ ಫ್ಲೆಕ್ಸ್ ತೆರವು ಮಾಡುವಾಗ ಎರಡು ಜನಾಂಗದವರ ನಡುವೆ ಗಲಾಟೆ ಆರಂಭಗೊಂಡಿತು. ವಿಷಯ ತಿಳಿದ ಕೂಡಲೇ ಅಕ್ಕಪಕ್ಕದ ನೂರಾರು ಜನರು ಆಲತ್ತೂರು ಗ್ರಾಮಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಎರಡು ಗುಂಪುಗಳು ನಡುವೆ ಜಗಳ ವಿಕೋಪಕ್ಕೆ ತೆರಳಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ಸಂದರ್ಭದಲ್ಲಿ ಡಿವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಪರಿಸ್ಥಿತಿ ಶಾಂತಗೊಳಿಸಿ, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.
ಶಾಂತಿ ಸಭೆ: ಆಲತ್ತೂರು ಗ್ರಾಮದಲ್ಲಿ ನಡೆದ ಫ್ಲೆಕ್ಸ್ ತೆರವು ಹಿನ್ನಲೆ ಉಂಟಾಗಿದ್ದ ಘಟನೆಗೆ ಸಂಬಂಧಿಸಿದಂತೆ ತಾಲೂಕು ತಹಸೀಲ್ದಾರ್ ರವರ ಸಭಾಂಗಣದಲ್ಲಿ ತಹಸೀಲ್ದಾರ್ ರವಿಶಂಕರ್ ಹಾಗೂ ಪೊಲೀಸ್ ಅಧಿಕಾರಿಗಳು ಹಾಗೂ ಎರಡು ಸಮೂದಾಯದ ಮುಖಂಡರ ಶಾಂತಿ ಸಭೆ ನಡೆಸಿ ಪ್ರಕರಣಕ್ಕೆ ತೆರೆ ಎಳೆಯಲಾಯಿತು. ಆದರೂ ಪ್ರಕರಣ ಬೂದಿ ಮುಚ್ಚಿದ ಕೆಂಡದಂತಿದೆ.
ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…
ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…
ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…
17ನೇ ಆವೃತ್ತಿಯ ಐಪಿಎಲ್ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…