ಚಾಮರಾಜನಗರ : ಜಿಲ್ಲೆಯ ಬಂಡೀಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಎಂ.ಎನ್.ನವೀನ್ ಹಾಗೂ ಆರ್ ಎಫ್ ಓ ಶಶಿಧರ್ ಅಧಿಕಾರ ಸ್ವೀಕರಿಸಿದ್ದಾರೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಎಂ.ಎನ್.ನವೀನ್ ಅವರಿಗೆ ಉಪ ವಿಭಾಗದ ಹೆಚ್ಚುವರಿ ಪ್ರಭಾರದಲ್ಲಿದ್ದ ಕೆ. ಪರಮೇಶ್ ರವರು ಅಧಿಕಾರ ಹಸ್ತಾಂತರ ಮಾಡಿದರೆ, ಬಂಡೀಪುರ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ್ ಅವರಿಗೆ ವಲಯದ ಹೆಚ್ಚುವರಿ ಪ್ರಭಾರದಲ್ಲಿದ್ದ ಎನ್.ಪಿ ನವೀನ್ ಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದರು.
ಈ ನಡುವೆ ಬಂಡೀಪುರದಲ್ಲಿ ಪ್ರಮುಖ ಹುದ್ದೆಗೆ ನೇಮಕ ಮಾಡದ ಬಗ್ಗೆ ಆಕ್ರೋಶಗಳು ವ್ಯಕ್ತವಾಗಿತ್ತು. ಇದೀಗ ಅಧಿಕಾರಿಗಳು ಅಧಿಕಾರ ಸ್ವೀಕರಿಸಿರುವುದು ನೆಮ್ಮದಿ ತಂದಿದೆ.