News Karnataka Kannada
Friday, May 03 2024
ಚಾಮರಾಜನಗರ

ಬಿಳಿಗಿರಿರಂಗನಬೆಟ್ಟದಲ್ಲಿ ಕರಿಚಿರತೆ ಪ್ರತ್ಯಕ್ಷ

Untitled 1
Photo Credit : News Kannada

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ವರ್ಷಗಳ ಬಳಿಕ ಕರಿಚಿರತೆ ಪ್ರತ್ಯಕ್ಷವಾಗಿದ್ದು, ಈ ವಿಚಾರ ಪರಿಸರ ಪ್ರೇಮಿಗಳನ್ನು ಪುಳಕಗೊಳಿಸಿದೆ.

ಇದುವರೆಗೆ ಈ ಕರಿಚಿರತೆ  ಸಾರ್ವಜನಿಕರ ಕಣ್ಣಿಗೆ ಬಿದ್ದಿಲ್ಲವಾದರೂ ಈ ಹಿಂದೆ 2020 ರ ಆಗಸ್ಟ್‌ನಲ್ಲಿ ಬಿಆರ್‌ಟಿಯ ಬೈಲೂರು ವಲಯದಲ್ಲಿ ಕಪ್ಪು ಚಿರತೆ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಸೆರೆಯಾಗಿತ್ತು. ಅದೇ ವರ್ಷದ ಡಿಸೆಂಬರ್‌ನಲ್ಲಿ ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯದಲ್ಲೂ ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಕರಿ ಚಿರತೆ ಕಂಡು ಬಂದಿತ್ತು .

ಈಗ ಹೊಳೆಮತ್ತಿ ನೇಚರ್‌ ಫೌಂಡೇಶನ್ ಡಾ.ಸಂಜಯ್ ಗುಬ್ಬಿ ಮತ್ತು ತಂಡದವರು ಬಿಳಿಗಿರಿರಂಗನಬೆಟ್ಟದಲ್ಲಿ ಚಿರತೆಗಳಿಗೆ ಸಂಬಂಧಿತ ಅಧ್ಯಯನಕ್ಕಾಗಿ ನಡೆಸಿದ್ದ ಕ್ಯಾಮರಾ ಟ್ರ್ಯಾಪ್‌ನಲ್ಲಿ ಮತ್ತೆ ಗೋಚರಿಸಿದೆ . ಡಿಸೆಂಬರ್ 2020 ರಲ್ಲಿ ಇದೇ ಗಂಡು ಚಿರತೆ ಮಲೈ ಮಹದೇಶ್ವರ ವನ್ಯಜೀವಿಧಾಮದ ಪಿ.ಜಿ.ಪಾಳ್ಯ ವಲಯದಲ್ಲಿ ಕಾಣಿಸಿಕೊಂಡಿತ್ತು . ಈ ಗಂಡು ಚಿರತೆಗೆ ಆರು ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ .

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮಗಳ ನಡುವೆ 1.6 ಕಿ.ಮೀ ಅಗಲದ ವನ್ಯಜೀವಿ ಕಾರಿಡಾರ್ ಇದೆ. ಈ ಎರಡೂ ವನ್ಯಧಾಮಗಳಲ್ಲಿ ಈ ಚಿರತೆಯ ಚಲನವಲನ ದಾಖಲಾಗಿರುವುದು ಈ ಕಾರಿಡಾರ್‌ನ ಮಹತ್ವವನ್ನು ಎತ್ತಿ ತೋರಿಸುತ್ತದೆ. ಹೀಗಾಗಿ ಈ ಕಾರಿಡಾರ್‌ನ ಸಂರಕ್ಷಿಸುವ ಅಗತ್ಯವಿದೆ. ಈ ಕಿರಿದಾದ ಕಾರಿಡಾರ್ ಮೂಲಕ ಕೊಳ್ಳೇಗಾಲ – ಹಾಸನೂರು ರಸ್ತೆ ( ರಾಜ್ಯ ಹೆದ್ದಾರಿ -38 )  ಹಾದು ಹೋಗುತ್ತದೆ ಮತ್ತು ರಸ್ತೆಯಲ್ಲಿನ ವಾಹನ ದಟ್ಟಣೆ ವನ್ಯಜೀವಿಗಳ ಓಡಾಟಕ್ಕೆ ಅಡ್ಡಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು