ಪಾಂಡವಪುರ: ತಾಲೂಕಿನ ಬೇಬಿ ಬೆಟ್ಟದ ಐತಿಹಾಸಿಕ ದನಗಳ ಜಾತ್ರೆಯ 7ನೇ ದಿನವಾದ ಸೋಮವಾರ ಬೆಟ್ಟದ ದೇವತೆಗಳಾದ ಮಾದೇಶ್ವರ ಮತ್ತು ಸಿದ್ದೇಶ್ವರರ ರಥೋತ್ಸವ ಕಾರ್ಯಕ್ರಮ ನಡೆಯಿತು.
ಚಂದ್ರವನ ಆಶ್ರಮದ ಪೀಠಾಧ್ಯಕ್ಷ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಹಾಗೂ ರಾಮಯೋಗೀಶ್ವರ ಮಠದ ಶ್ರೀ ಶಿವಬಸವ ಸ್ವಾಮೀಜಿಗಳು ರಥದ ಹಗ್ಗ ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
ಇದಕ್ಕೂ ಮೊದಲು ರಥೋತ್ಸವದ ಉತ್ಸವ ಮೂರ್ತಿಗಳಿಗೆ ಇಬ್ಬರು ಸ್ವಾಮೀಜಿಗಳು ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ನಂತರ ಮಾದೇಶ್ವರ ದೇವಸ್ಥಾನ ಮುಂಭಾಗದಿಂದ ಹೊರಟ ರಥವನ್ನು ಭಕ್ತಾಧಿಗಳು ದೇವರ ಸ್ಮರಣೆ ಮಾಡಿ ಜೈಕಾರ ಹಾಕುತ್ತಾ ದೇವಸ್ಥಾನವನ್ನು ಮೂರು ಬಾರಿ ಪ್ರದಕ್ಷಿಣೆ ಹಾಕಿಸಿದರು. ನಂತರ ರಥವು ಸ್ವಸ್ಥಾನಕ್ಕೆ ಮರಳಿತು.
ಈ ವೇಳೆ ಹಾಲು ಮಲೆ, ಜೇನು ಮಲೆ, ಎಪ್ಪತೇಳು ಮಲೆಯಲ್ಲಿ ತಪ್ಪದೇ ನಲಿದು ನರ್ತನ ಮಾಡುವ ಮಾದೇಶ್ವರನಿಗೆ ಉಘೇ ಉಘೇ ಎಂಬ ಭಕ್ತಿಪೂರ್ವಕ ಘೋಷಣೆಗಳು ಭಕ್ತ ಸಮೂಹದಿಂದ ಕೇಳಿ ಬಂದಿತು.
ರಥೋತ್ಸವದ ವೇಳೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತ ಸಮೂಹ ರಥದ ಮೇಲೆ ಹಣ್ಣು-ಜವನ ಎಸೆದು ಮಹದೇಶ್ವರ, ಸಿದ್ದೇಶ್ವರ ಸ್ವಾಮಿಗೆ ಭಕ್ತಿ ಸಮರ್ಪಿಸಿದರು.
ಈ ವೇಳೆ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಮತ್ತು ಶಿವಬಸವ ಸ್ವಾಮೀಜಿಗಳು ಸಿದ್ದೇಶ್ವರ ಮತ್ತು ಮಾದೇಶ್ವರರು ಎಲ್ಲ ಭಕ್ತಾಧಿಗಳಿಗೆ ಭಗವಂತ ಸೌಖ್ಯವನ್ನುಂಟು ಮಾಡಲಿ ಎಂದು ಆಶೀರ್ವದಿಸಿದರು.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.