ಚಾಮರಾಜನಗರ

ಮರಡಿಗುಡ್ಡ ವೃಕ್ಷವನದಲ್ಲಿ ಶುರುವಾಯ್ತು ಸಾಹಸಕ್ರೀಡೆ

ಚಾಮರಾಜನಗರ : ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ನಿಸರ್ಗದ ನಡುವೆ ನಲಿದಾಡಿ ಸಾಹಸ ಮಾಡುವ ಸಾಹಸಪ್ರಿಯರಿಗಾಗಿಯೇ ಜಿಪ್ ಲೈನ್ ಸಾಹಸ ಕ್ರೀಡೆಯನ್ನು ಕೊಳ್ಳೇಗಾಲದ ಮರಡಿಗುಡ್ಡ ವೃಕ್ಷ ವನದಲ್ಲಿ ಆರಂಭಿಸಲಾಗಿದೆ.

ಹಾಗೆನೋಡಿದರೆ ಮರಡಿಗುಡ್ಡ ವೃಕ್ಷ ವನವು ಬೆಟ್ಟಗುಡ್ಡಗಳನ್ನೊಳಗೊಂಡ ಹಸಿರು ಹಚ್ಚಡದಿಂದ ಕೂಡಿದ್ದು ನಿಸರ್ಗ ಪ್ರಿಯರಿಗೆ ಮುದನೀಡುತ್ತದೆ. ಇಂತಹ ಸುಂದರ ಪರಿಸರದಲ್ಲಿ ಒಂದೆಡೆಯಿಂದ ಮತ್ತೊಂದೆಡೆ ತಂತಿಯಲ್ಲಿ ಸಾಗುವ ಮೈನವಿರೇಳಿಸುವ, ಸಾಹಸಮಯ ಕ್ರೀಡೆಯಾದ ಜಿಪ್ ಲೈನ್ ವರದಾನವಾಗಿದೆ.

ಮರಡಿಗುಡ್ಡ ವೃಕ್ಷ ವನದ ಬೆಟ್ಟ-ಗುಡ್ಡದ ನಡುವೆ ಒಂದು ತುದಿಯಿಂದ ಮತ್ತೊಂದು ತುದಿಯವರೆಗೆ ತಂತಿಯನ್ನು ಅಳವಡಿಸಲಾಗಿದ್ದು, ಇದರಲ್ಲಿ  ಈ ತಂತಿ ಮೇಲೆ ಕೈಯಲ್ಲಿ ಸೆಲ್ಫಿ ಸ್ಟಿಕ್ ಹಿಡಿದು ಕೊಂಡು ಸುಂದರ ದೃಶ್ಯಗಳನ್ನು ಸೆರೆಹಿಡಿಯುತ್ತಾ ಮುಂದೆ ಸಾಗುವುದು ಸಾಹಸಪ್ರಿಯರಿಗೊಂದು ಹೊಸ ಅನುಭವ ಎಂದರೆ ತಪ್ಪಾಗಲಾರದು. ಇನ್ನು ಇಲ್ಲಿ ನುರಿತ ತರಬೇತಿದಾರರಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿರುವುದರಿಂದ ಸಾಹಸಪ್ರಿಯರು ಯಾವುದೇ ಭಯವಿಲ್ಲದೆ ಭಾಗವಹಿಸಬಹುದಾಗಿದೆ.

ಜಿಪ್ ಲೈನ್  ಸಾಹಸಕ್ಕಿಳಿಯುವ ಸಾಹಸಿಗರಿಗೆ ಅತ್ಯಾಧುನಿಕ 4ಜಿ   ಗೋಪ್ರೋ ಕ್ಯಾಮರಾ ಸೆಲ್ಫಿ ಸ್ಟಿಕ್ ನೀಡಲಾಗುತ್ತದೆ. ಇದನ್ನು ಬಳಸಿಕೊಂಡು ಪ್ರವಾಸಿಗರು  ತಂತಿ ಮೂಲಕ ತೇಲುತ್ತಾ ಸಾಗುವ ಕ್ಷಣವನ್ನು ಸಾಕ್ಷಿಯಾಗಿಸಿ ಕೊಳ್ಳಬಹುದಾಗಿದೆ. ಈಗಾಗಲೇ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸಿ ಜಿಪ್ ಲೈನ್  ಸಾಹಸದ ಅನುಭವ ಪಡೆದಿದ್ದಾರೆ. ಈ ಜಿಪ್ ಲೈನ್  ಸಾಹಸಕ್ರೀಡೆಯನ್ನು ಅರಣ್ಯ ಇಲಾಖೆಯು ಸುಮಾರು ಇಪ್ಪತ್ತು ಲಕ್ಷ ರೂ ವೆಚ್ಚದಲ್ಲಿ ಕೊರೊನಾ ಲಾಕ್ ಡೌನ್ ಸಮಯದಲ್ಲಿ ಆರಂಭಿಸಲಾಗಿದೆ.

ಸದ್ಯ ಜಿಪ್ ಲೈನ್ ಕ್ರೀಡೆಯತ್ತ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿತರಾಗಿದ್ದು, ಇದರ ಮಜಾ ಸವಿಯಲೆಂದೇ ಬರುತ್ತಿದ್ದಾರೆ. ಈಗಾಗಲೇ ಮಳೆಯಿಂದ ಮಿಂದೆದ್ದಿರುವ ಹಸಿರ ಸ್ವರ್ಗ ಸಾಹಸ ಕ್ರೀಡೆಗೆ ಬರುವವರಿಗೆ ಉಲ್ಲಾಸ ತುಂಬುತ್ತಿದೆ. ಒಂದಷ್ಟು ಮಂದಿ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಮತ್ತೊಂದಷ್ಟು ಮಂದಿ ಬೆಟ್ಟದ ತಪ್ಪಲಿನಲ್ಲಿ ಹಾಗೂ ದೂರದ ದೊಡ್ಡ ಮನೆ ಮಹಡಿಗಳ ಮೇಲೆ ನಿಂತು  ನೋಡಿ ಖುಷಿಪಡುತ್ತಿದ್ದಾರೆ.

ಈ ಕುರಿತಂತೆ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ  ಏಡುಕೊಂಡಲು  ಮಾತನಾಡಿ,  ಜಿಲ್ಲೆಯ ಸುತ್ತ ಮುತ್ತಲ ಜನರು ಹಾಗೂ  ವಿವಿಧ ಕಡೆಗಳಿಂದ ಆಗಮಿಸುವ ಪ್ರವಾಸಿಗರಿಗೆ ಸಾಹಸವನ್ನೊಳಗೊಂಡ ಮನರಂಜನೆ ನೀಡುವ ಉದ್ಧೇಶದಿಂದ ಜಿಪ್ ಲೈನ್ ಪ್ರಾರಂಭಿಸಿದ್ದಾಗಿ ಹೇಳಿದ್ದಾರೆ.

ಈಗ ಲಾಕ್ ಡೌನ್ ಆಗಿರುವುದರಿಂದ ಪ್ರವಾಸಿಗರ ಆಗಮನ ಕಡಿಮೆಯಾಗಿದ್ದರೂ ಮುಂದಿನ ದಿನಗಳಲ್ಲಿ ಇದು ಹೆಚ್ಚಳವಾಗುವ ಸಾಧ್ಯತೆಯಿದೆ.

Raksha Deshpande

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago