ಚಾಮರಾಜನಗರ: ರಾಜ್ಯದಲ್ಲಿ ಮುಖ್ಯ ಮಂತ್ರಿಗಳ ಬದಲಾವಣೆಯ ಚರ್ಚೆ ಜೋರಾಗಿ ನಡೆದಿರುವ ಬೆನ್ನಲ್ಲೇ ಯಡಿಯೂರಪ್ಪ ಆಪ್ತ ಬಣದ ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ್ ಕುಮಾರ್ ಅವರು ರಾಜ್ಯದಲ್ಲಿ ಮುಖ್ಯ ಮಂತ್ರಿಗಳ ಬದಲಾವಣೆಯಿಲ್ಲ, ಈ ಬಗ್ಗೆ ಪಕ್ಷದಲ್ಲಿ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಬದಲಾವಣೆ ವಿಚಾರ ಕೇವಲ ಊಹಾಪೋಹ ಆಗಿದ್ದು ಯಡಿಯೂರಪ್ಪ ಬದಲಾವಣೆ ಬಗ್ಗೆ ಹೈಕಮಾಂಡ್, ರಾಜ್ಯಾಧ್ಯಕ್ಷರಾಗಲಿ,ಶಾಸಕರಾಗಲಿ, ಸಚಿವರಾಗಲಿ ಯಾರೂ ಕೂಡ ಮಾತನಾಡಿಲ್ಲ. ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಪ್ರಶ್ನಾತೀತ ನಾಯಕರಾಗಿದ್ದಾರೆ. ನಾನು ಕೂಡ ನಿನ್ನೆ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿದ್ದೆ. ಅವರ ಮನೆಯಲ್ಲಿ ಅಭಿವೃದ್ಧಿ ವಿಚಾರದ ಬಗ್ಗೆ ಚರ್ಚೆ ನಡೆಯಿತು. ಕ್ಷೇತ್ರದ ಅಭಿವೃದ್ಧಿಗೆ ಈ ಬಾರಿ ಅನುದಾನ ಕೊಡುವ ಭರವಸೆ ಕೊಟ್ಟಿದ್ದಾರೆ.
ನಮ್ಮ ಪಕ್ಷದ 120 ಮಂದಿ ಶಾಸಕರಲ್ಲಿ ಇಬ್ಬರು ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡಿದರೆ ಯಾವುದೇ ಬೆಲೆ ಇಲ್ಲ . ಉಳಿದೆಲ್ಲ ಶಾಸಕರು ಕೂಡ ಯಡಿಯೂರಪ್ಪ ಪರ ಇದ್ದಾರೆ. ರಾಜ್ಯಾಧ್ಯಕ್ಷ ಕಟೀಲ್ ಆಡಿಯೋ ವೈರಲ್ ವಿಚಾರವಾಗಿ ಇದು ನಕಲಿ ಆಡಿಯೋ ಅಂತ ಕಟೀಲ್ ಕೂಡ ಹೇಳಿದ್ದಾರೆ. ಈ ಬಗ್ಗೆ ದೂರು ಸಹ ಕೊಟ್ಟಿದ್ದಾರೆ. ತನಿಖೆ ನಂತರ ಗೊತ್ತಾಗುತ್ತೆ ಎಂದು ತಿಳಿಸಿದ್ದಾರೆ.
ಮುಖ್ಯ ಮಂತ್ರಿಗಳ ಬದಲಾವಣೆ ಇಲ್ಲ ; ಶಾಸಕ ನಿರಂಜನ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.