ಅವರು ನಿನ್ನೆ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಯೋಜಿಸಿದ್ದ 450 ಹಾಸಿಗೆಯ ಬೋಧನಾ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಅವರೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ರಾಜ್ಯಪಾಲರಾದ ಥ್ಯಾವರ್ ಚಂದ್ ಗೆಹ್ಲೊಟ್ ಅವರು ಕೂಡ ಭಾಗಿಯಾಗಿದ್ದರು.
ಉದ್ಘಾಟನೆ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯದ ಮುಖ್ಯಮಂತ್ರಿಗಳಾದವರು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡುವ ಸಂಬಂಧ ಸಾಕಷ್ಟು ಚರ್ಚೆಗಳು ನಡೆಯುತ್ತವೆ. ಆದರೆ ನಾನು ಇಂದು ಬರದೇ ಇದ್ದಿದ್ದರೆ ನನ್ನ ಕರ್ತವ್ಯಲೋಪವಾಗುತ್ತಿತ್ತು ಎಂದಿದ್ದಾರೆ.