ಪಿರಿಯಾಪಟ್ಟಣ: ತಾಲ್ಲೂಕಿನ ಬೆಟ್ಟದಪುರ ಸಮೀಪದ ಗ್ರಾಮವೊಂದರ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಸಹಾಯಕ ಮಕ್ಕಳ ರಕ್ಷಣಾಧಿಕಾರಿ ಜಿ.ಟಿ ಅಶೋಕ್ ಅವರು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊಡಗು ಜಿಲ್ಲೆ ಹಳ್ಳಗೊಟೆಯ ಸಚಿನ್ ಎಂಬಾತ ೧೭ ವರ್ಷದ ಬಾಲಕಿಯೋರ್ವಳ ಮೇಲೆ ಈಚೆಗೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಿರುವುದಾಗಿ ಬಾಲಕಿ ನೀಡಿರುವ ಹೇಳಿಕೆ ಆಧರಿಸಿ ಮೈಸೂರಿನ ಬಾಲಕಿಯರ ಬಾಲಮಂದಿರದ ಅಧೀಕ್ಷಕರು ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಮಕ್ಕಳ ರಕ್ಷಣಾ ಇಲಾಖೆಗೆ ಸೂಚಿಸಿದ ಹಿನ್ನೆಲೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ, ಪೊಲೀಸರು ತನಿಖೆ ಕೈಗೊಂಡಿದ್ದಾರೆ.