News Karnataka Kannada
Monday, April 29 2024
ಚಾಮರಾಜನಗರ

ಸಿಡಿಲು ಬಡಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ ಪರಿಹಾರ ವಿತರಣೆ

Hunsuru
Photo Credit :

ಹುಣಸೂರು: ಇತ್ತೀಚೆಗೆ ಸುರಿದ ಮಳೆಯ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ ಕರ್ಣಕುಪ್ಪೆ ಗ್ರಾಮದ ಮಹಿಳೆಯ ಕುಟುಂಬಕ್ಕೆ ಸರ್ಕಾರದಿಂದ ನೀಡಲಾಗುವ ಐದು ಲಕ್ಷ ರೂ.ಗಳ ಪರಿಹಾರವನ್ನು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ವಿತರಿಸಿದರು.

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕರ್ಣಕುಪ್ಪೆ ಗ್ರಾಮದ ನಿವಾಸಿ ಗಾಯಿತ್ರಮ್ಮ ಎಂಬುವರು  ಶಾಲೆಯ ಮುಖ್ಯ ಅಡುಗೆಯವರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಸಿಡಿಲು ಬಡಿದು ಸಾವನ್ನಪ್ಪಿದ್ದರು.

ಶನಿವಾರ ಹನಗೋಡು ಹೋಬಳಿಯ ಕರ್ಣಕುಪ್ಪೆ ಗ್ರಾಮಕ್ಕೆ  ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು, ಗಾಯಿತ್ರಮ್ಮ ಅವರ ಮನೆಗೆ ಭೇಟಿ  ನೀಡಿ, ಅವರ ಮಕ್ಕಳಿಗೆ ಸಾಂತ್ವಾನ ಹೇಳಿ ಸರಕಾರದಿಂದ ನೀಡಲಾಗಿರುವ ಐದು ಲಕ್ಷ ರೂ.ನ ಚೆಕ್ ವಿತರಿಸಿ, ಈ ಹಣವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದರಲ್ಲದೆ, ಸರಕಾರದಿಂದ ಯಾವುದೇ ನೆರವು ಬೇಕಿದ್ದಲ್ಲಿ ತಾಲೂಕು ಆಡಳಿತವನ್ನು ಸಂಪರ್ಕಿಸುವಂತೆ ಹೇಳಿದ್ದಾರೆ.

ಇದೇ ವೇಳೆ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ಹನಗೋಡು ಹೋಬಳಿಯ ಹೆಮ್ಮಿಗೆ, ಹೆಮ್ಮಿಗೆ ಹಾಡಿ, ಹೆಮ್ಮಿಗೆ ಕಾಲೋನಿ ಹಾಗೂ ಕಾಳಬೂಚನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ  ಹಾನಿಗೊಳಗಾದ ಮನೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಜಿಲ್ಲಾಧಿಕಾರಿ ಭೇಟಿ ವೇಳೆ ಉಪವಿಭಾಗಾಧಿಕಾರಿ ವರ್ಣಿತ್ ನೇಗಿ, ತಹಸೀಲ್ದಾರ್ ಡಾ.ಅಶೋಕ್, ಆರ್.ಐ.ಮಹದೇವ್, ವಿ.ಎ.ಶಿವಕುಮಾರ್, ಕಂದಾಯ ಇಲಾಖೆ ಹಾಗೂ ಗ್ರಾ.ಪಂ.ಅಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು