News Karnataka Kannada
Friday, May 03 2024
ಚಾಮರಾಜನಗರ

ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

Chamaraj
Photo Credit :

ಚಾಮರಾಜನಗರ: ಸೋಮವಾರದಿಂದ ಆರಂಭಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಬಂದಿದ್ದರೂ ಅವರ ಮನವೊಲಿಕೆಯ ಬಳಿಕ ಹಿಬಾಜ್ ತೆಗೆದು ಪರೀಕ್ಷೆ ಬರೆದಿದ್ದಾರೆ.

ಜಿಲ್ಲೆಯ 58 ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿದ್ದು, ಮುಸ್ಲಿಂ ಸಮುದಾಯದ ಕೆಲವು ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಕೇಂದ್ರಗಳಿಗೆ ಬಂದಿದ್ದರೂ, ಪೊಲೀಸರು, ಶಿಕ್ಷಕರು ಮನವೊಲಿಸಿದ ನಂತರ ಹಿಜಾಬ್ ತೆಗೆದು ಪರೀಕ್ಷಾ ಕೊಠಡಿಗೆ ಹೋಗಿದ್ದಾರೆ. ಚಾಮರಾಜನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಲವು ವಿದ್ಯಾರ್ಥಿನಿಯರು ಬುರ್ಖಾ ಹಾಗೂ ಹಿಜಾಬ್ ಹಾಕಿಕೊಂಡು ಬಂದಿದ್ದರು. ಪ್ರವೇಶ ದ್ವಾರದಲ್ಲಿದ್ದ ಪೊಲೀಸ್ ಸಿಬ್ಬಂದಿ ಹೈಕೋರ್ಟ್ ಹಾಗೂ ರಾಜ್ಯ ಸರ್ಕಾರದ ಆದೇಶವನ್ನು ವಿದ್ಯಾರ್ಥಿಗಳು ಹಾಗೂ ಅವರೊಂದಿಗೆ ಬಂದಿದ್ದ ಪೋಷಕರ ಗಮನಕ್ಕೆ ತಂದರು.

 ಕೆಲವು ವಿದ್ಯಾರ್ಥಿನಿಯರು ಕೊಠಡಿಗೆ ಹೋಗುವ ಮುನ್ನವೇ ಹಿಜಾಬ್ ತೆಗೆದರೆ, ಇನ್ನೂ ಕೆಲವರು ಕೊಠಡಿಯ ಒಳಗೂ ಹಿಜಾಬ್ ಧರಿಸಿದ್ದರು. ಪರೀಕ್ಷಾ ಸಿಬ್ಬಂದಿ ಆ ವಿದ್ಯಾರ್ಥಿನಿಯರಿಗೂ ಮನವರಿಕೆ ಮಾಡಿದ ನಂತರ ಹಿಜಾಬ್ ತೆಗೆದರು. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಡಿಡಿಪಿಐ ಎಸ್.ಎನ್.ಮಂಜುನಾಥ್ ಜಿಲ್ಲೆಯ 58 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. 56 ಕೇಂದ್ರಗಳು ಹೊಸ ವಿದ್ಯಾರ್ಥಿಗಳು ಹಾಗೂ ಎರಡು ಕೇಂದ್ರಗಳು ಖಾಸಗಿ ವಿದ್ಯಾರ್ಥಿಗಳಿಗೆ ಮೀಸಲಾಗಿವೆ. 12,271 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಸಮವಸ್ತ್ರ ವಿಚಾರದಲ್ಲಿ ಕೋರ್ಟ್ ಹಾಗೂ ಸರ್ಕಾರದ ಆದೇಶವನ್ನು ಪಾಲಿಸುತ್ತೇವೆ. ಹಿಜಾಬ್ ಧರಿಸಿ ಬಂದವರನ್ನು ಮನವೊಲಿಸುತ್ತೇವೆ. ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಕಾರಣಕ್ಕೆ ಪರೀಕ್ಷೆ ಬರೆಯದೆ ವಾಪಸ್ ಹೋದ ಪ್ರಕರಣ ಈವರೆಗೆ ವರದಿಯಾಗಿಲ್ಲ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು