ಚಾಮರಾಜನಗರ: ಮತ್ತೊಮ್ಮೆ ಮೊದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಇಚ್ಛೆಯಿಂದ 102 ವರ್ಷದ ವೃದ್ಧೆ ಒಬ್ಬರು ಪ್ರಸಿದ್ಧ ದೇವಾಲಯ ಮಲೆ ಮಹಾದೇರಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ.ಇಳಿ ವಯಸ್ಸಿನ ವೃದ್ಧೆಯ ಮನಸ್ಸನ್ನು ಮೊದಿಯವರು ಗೆದ್ದಿದ್ದಾರೆ ಎಂಬುದು ಈ ಮೂಲಕ ತಿಳಿಯುತ್ತದೆ.
ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಮಾದಪ್ಪನ ದರ್ಶನಕ್ಕೆ 18 ಕಿಲೋಮೀಟರ್ ಕಾಲ್ನಡಿಗೆ ಮೂಲಕ ಶತಾಯುಷಿ ಅಜ್ಜಿ ಕ್ರಮಿಸಿದ್ದಾರೆ. ಹೀಗೆ ಮೋದಿಗಾಗಿ ಪಾದಯಾತ್ರೆ ನಡೆಸಿದ ಅಜ್ಜಿಯನ್ನು ತುಮಕೂರು ಜಿಲ್ಲೆ ತಿಪಟೂರು ಮೂಲದ ಪಾರ್ವತಮ್ಮ ಎಂದು ಗುರುತಿಸಲಾಗಿದೆ.
ದೇಶಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಒಳ್ಳೆಯದಾಗಬೇಕು. ಮಳೆ, ಬೆಳೆ ಚೆನ್ನಾಗಿ ಆಗಬೇಕು. ಹಾಗೆ ಆದರೆ ಅಲ್ಲವೇ ರೈತರಿಗೆ ಒಳಿತಾಗುವುದು? ಅದೇ ರೀತಿ ಕಾಡು ಪ್ರಾಣಿಗಳಿಗೂ ಒಳ್ಳೆಯದಾಗಬೇಕು. ಅವುಗಳಿಗೆ ಕುಡಿಯುವ ನೀರು ದೊರೆಯುವಂತಾಗಬೇಕು. ಈ ಎಲ್ಲ ಬೇಡಿಕೆಗಳನ್ನು ದೇವರ ಮುಂದಿಟ್ಟುಕೊಂಡು ಮಹದೇಶ್ವರನ ದರ್ಶನಕ್ಕೆ ಬರುತ್ತಿದ್ದೇನೆ ಎಂದು ಪಾರ್ವತಮ್ಮ ಹೇಳಿದ್ದಾರೆ.
ಅಜ್ಜಿ ಜೊತೆಯಲ್ಲಿ ಪಾದಯಾತ್ರೆ ಮಾಡುವವರು ಒಬ್ಬರು ನಿಮಗೆ ಮೊದಿ ಏಕೆ ಪ್ರಧಾನಿ ಆಗಬೇಕು ಎಂದಿದ್ದಾರೆ. ಆಗ ಉತ್ತರಿಸಿದ ಅಜ್ಜಿ, ದೇಶಕ್ಕೆ ಒಳ್ಳೆಯದಾಗಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ವೃದ್ಧೆ ಹೇಳಿದ್ದಾರೆ. ನಿಮ್ಮ ಆಶೀರ್ವಾದ ಇದ್ದರೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಿಯೇ ಆಗುತ್ತಾರೆ ಎಂದು ಸ್ಥಳದಲ್ಲಿ ಇದ್ದವರು ಹೇಳುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ನಿಮ್ಮ ಆಶಿರ್ವಾದ ನಮ್ಮ ಮೇಲೂ ಇರಲಿ ಎಂದು ಪಾದಯಾತ್ರಿಗಳು ಹೇಳಿದ್ದಾರೆ. ಅಜ್ಜಿಯ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ವಿಷೇಶ ಎನೆಂದರೆ ಅಜ್ಜಿ 5-6 ವರ್ಷಗಳಿಂದ ಪಾದಯಾತ್ರೆ ಮಾಡುತ್ತಿದ್ದಾರೆ.