News Karnataka Kannada
Wednesday, May 01 2024
ಚಾಮರಾಜನಗರ

ಕಂಟೈನರ್ ಮತ್ತು ಲಾರಿ ನಡುವೆ ಅಪಘಾತ: ಕೆಲ ಗಂಟೆಗಳ ಕಾಲ ವಾಹನ ಸಂಚಾರ ಬಂದ್

ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡು ಜಿಲ್ಲೆ ದಿಂಬಂ ಘಾಟ್ ನಲ್ಲಿ ಕಂಟೈನರ್ ಮತ್ತು ಲಾರಿ ನಡುವೆ ಅಪಘಾತವಾಗಿದ್ದು, ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ, ಇದರಿಂದಾಗಿ ಕರ್ನಾಟಕ ತಮಿಳುನಾಡು ನಡುವೆ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಬಂದ್ ಆಗಿತ್ತು.
Photo Credit : NewsKarnataka

ಚಾಮರಾಜನಗರ: ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡು ಜಿಲ್ಲೆ ದಿಂಬಂ ಘಾಟ್ ನಲ್ಲಿ ಕಂಟೈನರ್ ಮತ್ತು ಲಾರಿ ನಡುವೆ ಅಪಘಾತವಾಗಿದ್ದು, ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ, ಇದರಿಂದಾಗಿ ಕರ್ನಾಟಕ ತಮಿಳುನಾಡು ನಡುವೆ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಬಂದ್ ಆಗಿತ್ತು.

ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ದಿಂಬಂ ಘಾಟ್ ನಲ್ಲಿ ಈರೋಡ್ ನಿಂದ ಚಾಮರಾಜನಗರ ಕಡೆಗೆ ಬರುತ್ತಿದ್ದ ಸರಕು ಹೊತ್ತ ಕಂಟೈನರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ದಿಂಬಂ ಘಾಟ್ ನ 15 ನೇ ತಿರುವಿನಲ್ಲಿ ಎದುರಿಗೆ ಬರುತ್ತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿತ್ತು.

ಘಟನೆಯಿಂದಾಗಿ ಗಂಟೆ ಗಟ್ಟಲೆ ಎರಡೂ ರಾಜ್ಯಗಳ ನಡುವೆ ಸಂಚಾರ ಬಂದ್ ಆಗಿ, ರಾಷ್ಟ್ರೀಯ ಹೆದ್ದಾರಿಯಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು