ಚಾಮರಾಜನಗರ: ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡು ಜಿಲ್ಲೆ ದಿಂಬಂ ಘಾಟ್ ನಲ್ಲಿ ಕಂಟೈನರ್ ಮತ್ತು ಲಾರಿ ನಡುವೆ ಅಪಘಾತವಾಗಿದ್ದು, ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ, ಇದರಿಂದಾಗಿ ಕರ್ನಾಟಕ ತಮಿಳುನಾಡು ನಡುವೆ ಕೆಲ ಗಂಟೆಗಳ ಕಾಲ ವಾಹನ ಸಂಚಾರ ಬಂದ್ ಆಗಿತ್ತು.
ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ದಿಂಬಂ ಘಾಟ್ ನಲ್ಲಿ ಈರೋಡ್ ನಿಂದ ಚಾಮರಾಜನಗರ ಕಡೆಗೆ ಬರುತ್ತಿದ್ದ ಸರಕು ಹೊತ್ತ ಕಂಟೈನರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ದಿಂಬಂ ಘಾಟ್ ನ 15 ನೇ ತಿರುವಿನಲ್ಲಿ ಎದುರಿಗೆ ಬರುತ್ತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿತ್ತು.
ಘಟನೆಯಿಂದಾಗಿ ಗಂಟೆ ಗಟ್ಟಲೆ ಎರಡೂ ರಾಜ್ಯಗಳ ನಡುವೆ ಸಂಚಾರ ಬಂದ್ ಆಗಿ, ರಾಷ್ಟ್ರೀಯ ಹೆದ್ದಾರಿಯಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.