ಚಾಮರಾಜನಗರ: ಚಾಮರಾನಗರ ಜಿಲ್ಲೆಯ ಹನೂರು ತಾಲ್ಲೂಕಿನ ಒಡೆಯರಪಾಳ್ಯದ ಸಿ ವಿಲೇಜ್ ಸಮೀಪ 15 ಕ್ಕೂ ಹೆಚ್ಚು ಜಾನುವಾರುಗಳ ಕಾಲುಗಳಿಗೆ ಕಿಡಿಗೇಡಿಗಳು ಮಚ್ಚಿನಿಂದ ಕಡಿದಿರುವ ಘಟನೆ ನಡೆದಿದೆ.
ಹುತ್ತೂರು ಗ್ರಾಪಂ ವ್ಯಾಪ್ತಿಯ ಬಸವರಾಜು, ರಘು, ಸಿದ್ದಪ್ಪ ಎಂಬುವರಿಗೆ ಸೇರಿದಂತಹ ಜಾನುವಾರುಗಳ ಮೇಲೆ ಹಲ್ಲೆ ಮಾಡಲಾಗಿದೆ. ಜಾನುವಾರಗಳ ಪಾಲಕರು ಮೇಯಲು ಗುಂಡಿಮಾಳ ಆಸುಪಾಸಿನಲ್ಲಿ ಬಿಟ್ಟಿದ್ದ ಸಂದರ್ಭದಲ್ಲಿ ಜಮೀನುಗಳಿಗೆ ನುಗ್ಗಿದೆ ಎಂದು ತೇಜು ಎಂಬ ಟಿಬೇಟ್ ವ್ಯಕ್ತಿ ಜಾನುವಾರುಗಳ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕೃತ್ಯವನ್ನು ಕಂಡಂತಹ ಜಾನುವಾರುಗಳ ಪಾಲಕರು ಗೋಳಾಡುತ್ತಿರುವಂತಹ ದೃಶ್ಯ ಮನಕಲಕುವಂತಿತ್ತು. ಘಟನಾ ಸ್ಥಳಕ್ಕೆ ಹನೂರು ಪೋಲಿಸರು ತೆರಳಿ ಮುಂದಿನ ಕ್ರಮಕೈಗೊಂಡಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…
ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…