News Karnataka Kannada
Thursday, May 02 2024
ಚಾಮರಾಜನಗರ

ಗುಂಡ್ಲುಪೇಟೆ: ಬಂಡೀಪುರ ಅರಣ್ಯ ಸಿಬ್ಬಂದಿ ಕಾರ್ಯಕ್ಕೆ ಮೋದಿ ಶ‍್ಲಾಘನೆ

Bandipur Forest Staff
Photo Credit : By Author

ಗುಂಡ್ಲುಪೇಟೆ: ವಿದ್ಯುತ್ ಸ್ಪರ್ಶದಿಂದ ಗಾಯಗೊಂಡಿರುವ ಕಾಡಾನೆಯನ್ನು ರಕ್ಷಿಸಿ ಶುಶ್ರೂಷೆ ಮಾಡಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿ, ನಮ್ಮ ಜನರಲ್ಲಿರುವ ಸಹಾನುಭೂತಿಗೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ತಾಲೂಕಿನ ಬರಗಿ ಗ್ರಾಮದಲ್ಲಿ ರಾಜು ಎಂಬುವರ ಜಮೀನಿನಲ್ಲಿ ಅಕ್ರಮವಾಗಿ ಹಾಯಿಸಿದ್ದ ವಿದ್ಯುತ್ ಸಂಪರ್ಕಕ್ಕೆ ಕಾಡಾನೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿತ್ತು. ಅದಕ್ಕೆ ಅರಣ್ಯ ಇಲಾಖೆಯ ಪಶುವೈದ್ಯಾಧಿಕಾರಿಗಳ ತಂಡ ಚಿಕಿತ್ಸೆ ನೀಡಿ ಚೇತರಿಸುತ್ತಿದೆ.

ಈ ಬಗ್ಗೆ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯದ ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ವಿದ್ಯುತ್ ಸ್ಪರ್ಶದಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆನೆಯನ್ನು ರಕ್ಷಿಸಲಾಗಿದೆ ಎಂದು ತಿಳಿಸಲು ತುಂಬಾ ಸಂತೋಷವಾಗಿದೆ. ಹೆಣ್ಣು ಆನೆಯನ್ನು ಮತ್ತೆ ಮೀಸಲು ಪ್ರದೇಶಕ್ಕೆ ಬಿಡಲಾಗಿದ್ದು, ತೀವ್ರ ನಿಗಾ ಇರಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಇದನ್ನು ಗಮನಿಸಿದ ಮೋದಿಯರು ಕೂಡ ಆ ಬಗ್ಗೆ ಟ್ವೀಟ್ ಮಾಡಿರುವುದು ಎಲ್ಲರ ಗಮನಸೆಳೆದಿದೆ. ನಮ್ಮ ಅರಣ್ಯ ಮುಂಚೂಣಿ, ಕಾರ್ಯಕರ್ತರು ನಮ್ಮ ಹೆಮ್ಮೆ ಎಂದು ಟ್ವಿಟ್ಟರ್ ನಲ್ಲಿ ಶ್ಲಾಘಿಸಿದ್ದಾರೆ. ಇದೀಗ ಬಂಡೀಪುರ ಅರಣ್ಯ ಸಿಬ್ಬಂದಿಗಳ ಕಾರ್ಯವೈಖರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಇನ್ನಷ್ಟು ಉತ್ತಮ ಕೆಲಸ ಮಾಡಲು ಉತ್ಸಾಹ ತುಂಬುವಂತೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು