News Karnataka Kannada
Wednesday, May 08 2024
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ಸಿದ್ಧತೆ

BJP gears up for 'Vijay Sankalp Abhiyan' in Gundlupet
Photo Credit : By Author

ಗುಂಡ್ಲುಪೇಟೆ: ಮುಂಬರುವ ವಿಧಾನಸಭೆ ಚುನಾವಣೆಯ ಸಿದ್ಧತೆ ಭಾಗವಾಗಿ ಬಿಜೆಪಿಯು ಜ. 21ರಿಂದ 29ರವರೆಗೆ ರಾಜ್ಯದಾದ್ಯಂತ ಬೂತ್‌ ಮಟ್ಟದಲ್ಲಿ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಂಡಿದ್ದು ಅದರಂತೆ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲು ಸರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಭಿಯಾನದ ಮೂಲಕ ರಾಜ್ಯದಾದ್ಯಂತ ಎರಡು ಕೋಟಿ ಮತದಾರರನ್ನು ತಲುಪುವ ಗುರಿ ಹೊಂದಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್‌ ನಡ್ಡಾ, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜ.21ರಂದು ಬೆಳಿಗ್ಗೆ 11 ಗಂಟೆಗೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಭಾಗವಹಿಸಲಿದ್ದಾರೆ. ಅದೇ ಸಮಯದಲ್ಲಿ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲೂ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದರು.

ಜನವರಿ 2 ರಿಂದ 12ರವರೆಗೆ ನಡೆದಿದ್ದ ಬೂತ್‌ ವಿಜಯಿ ಅಭಿಯಾನದಲ್ಲಿ ತಾಲೂಕಿನ 249 ಬೂತ್‌ಗಳಲ್ಲಿ ಬೂತ್‌ ಮಟ್ಟದ ಸಮಿತಿ ರಚಿಸಲಾಗಿದೆ. ಅಭಿಯಾನದಲ್ಲಿ ‍ಪಕ್ಷದ ಮುಖಂಡರು, ಪದಾಧಿಕಾರಿಗಳು, ಶಾಸಕರು, ಸಚಿವರೆಲ್ಲ ಮನೆ ಮನೆಗಳಿಗೆ ತೆರಳಿ, ಮತದಾರರನ್ನು ಭೇಟಿ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ವಿವರಿಸಲಿದ್ದಾರೆ. ಈ ಸಂಬಂಧದ ಕರಪತ್ರಗಳನ್ನು ವಿತರಿಸಲಿದ್ದಾರೆ. ರಾಜ್ಯಮಟ್ಟದಲ್ಲಿ ಎರಡು ಕೋಟಿ ಮತದಾರರನ್ನು ತಲುಪುವ ಗುರಿ ಹೊಂದಲಾಗಿದ್ದು, ಜಿಲ್ಲೆಯಲ್ಲಿ ನಾಲ್ಕು ಲಕ್ಷದಿಂದ ಐದು ಲಕ್ಷ ಮತದಾರರನ್ನು ನಾವು ಭೇಟಿ ಮಾಡಲಿದ್ದೇವೆ. ಬಿಜೆಪಿ ಸರ್ಕಾರಗಳ ಸಾಧನೆಯನ್ನು ಅವರ ಮುಂದೆ ತೆರೆದಿಡಲಿದ್ದೇವೆ ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಕಮರಳ್ಳಿ ರವಿ, ಸಂಚಾಲಕರಾದ ಗೀತಾ, ಮಹದೇವ ಪ್ರಸಾದ್, ಮಲ್ಲಿಕಾರ್ಜುನ್, ಸುಜೆಂದ್ರ, ಪ್ರಭಾಕರ್, ನವೀನ್ ಮೌರ್ಯ ಹಾಗೂ ಮಂಜುನಾಥ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು