ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಶಾಲಾ ವಿದ್ಯಾರ್ಥಿಗಳ ಮೇಲೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಸೋಮಹಳ್ಳಿ ಬಳಿ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡ ವಿದ್ಯಾರ್ಥಿಗಳನ್ನು ಕಬ್ಬಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಗುರುವಾರ ಬೆಳೆಗ್ಗೆ ಎಂದಿನಂತೆ ಸೋಮಹಳ್ಳಿ ಗ್ರಾಮದಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಡೆಗೆ ಕೊಡಗಾಪುರ ಗ್ರಾಮದ ಕಡೆಯಿಂದ ಬಂದ ಬಸ್ಸೊಂದು ಏಕಾಏಕಿ ನುಗ್ಗಿದ ಪರಿಣಾಮ ತಪ್ಪಿಸಿಕೊಳ್ಳಲು ಓಡಿದ ವಿದ್ಯಾರ್ಥಿಗಳು ಓಡಿದ್ದಾರೆ. ಈ ವೇಳೆ ಒಬ್ಬ ವಿದ್ಯಾರ್ಥಿಗೆ ತಲೆ ಮತ್ತು ಮುಖದ ಭಾಗಕ್ಕೆ ತೀವ್ರತರವಾದ ಗಾಯವಾಗಿದ್ದು ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಕಬ್ಬಹಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ವಿದ್ಯಾರ್ಥಿಗಳ ಈ ಸ್ಥಿತಿಗೆ ಕಾರಣನಾದ ಬಸ್ ಚಾಲಕನ ವಿರುದ್ಧ ಪೋಷಕರು ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.