ಚಾಮರಾಜನಗರ: ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಹೊರ ಬರಲಾರದೆ ಸಜೀವ ದಹನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ದುರ್ಘಟನೆ ನಡೆದಿದೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಮೈಸೂರು ಮೂಲದ ಮುಜಾಮಿಲ್ ಅಹಮದ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.ಕಳೆದ ಒಂದು ವಾರದ ಹಿಂದೆ ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಪುತ್ರ ಸೂರಜ್ಗೆ ಅಪಘಾತವಾಗಿದ್ದ ಸಮೀಪದ ಸ್ಥಳದಲ್ಲೇ ಮತ್ತೆ ಈ ಅಪಘಾತ ಸಂಭವಿಸಿದೆ. ಬೇಗೂರು ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.