News Karnataka Kannada
Sunday, May 12 2024
ಚಾಮರಾಜನಗರ

ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು: ಹೊರಬರಲಾರದೆ ಚಾಲಕ ಸಜೀವದಹನ

car Accident
Photo Credit : News Kannada

ಚಾಮರಾಜನಗರ: ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಹೊರ ಬರಲಾರದೆ ಸಜೀವ ದಹನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ದುರ್ಘಟನೆ ನಡೆದಿದೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಮೈಸೂರು ಮೂಲದ ಮುಜಾಮಿಲ್ ಅಹಮದ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.ಕಳೆದ ಒಂದು ವಾರದ ಹಿಂದೆ ಪಾರ್ವತಮ್ಮ ರಾಜ್‌ಕುಮಾರ್ ತಮ್ಮನ ಪುತ್ರ ಸೂರಜ್‌ಗೆ ಅಪಘಾತವಾಗಿದ್ದ ಸಮೀಪದ ಸ್ಥಳದಲ್ಲೇ ಮತ್ತೆ ಈ ಅಪಘಾತ ಸಂಭವಿಸಿದೆ. ಬೇಗೂರು ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು