News Karnataka Kannada
Wednesday, May 01 2024
ಚಾಮರಾಜನಗರ

ಕಾವೇರಿ ನದಿ ನೀರು ವಿವಾದ ಹಿನ್ನಲೆ: ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ

Cauvery water dispute: BSNL office gheraoed
Photo Credit : News Kannada

ಚಾಮರಾಜನಗರ: ಕಾವೇರಿ ನದಿ ನೀರು ವಿವಾದ ಹಿನ್ನಲೆಯಲ್ಲಿ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಹೆಚ್ಚಾಗುತಿದ್ದು, ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಹಾಕುವ ಚಳವಳಿ ಶುಕ್ರವಾರ ನಡೆಯಿತು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನಿತ್ಯವೂ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ವಿನೂತನ ಚಳವಳಿ ನಡೆಸುತ್ತಿದ್ದು, ಶುಕ್ರವಾರ ಕೇಂದ್ರ ಸರ್ಕಾರ ಸೌಮ್ಯದಲ್ಲಿರುವ ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಕನ್ನಡ ಧ್ವಜವನ್ನು ಹಿಡಿದು ಕಾವೇರಿ ನಮ್ಮದು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮರಣ ಶಾಸನ ಬರೆದ ಸುಪ್ರಿಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆ ಹಾಗೂ ಆದೇಶವನ್ನು ಖಂಡಿಸಿ ಪಾದಯಾತ್ರೆ ಮೂಲಕ ಚಾಮಲ್ ಬೀದಿಯಲ್ಲಿರುವ ಬಿಎಸ್ಎನ್ಎಲ್ ಕಛೇರಿಗೆ ಆಗಮಿಸಿ ಧರಣಿ ನಡೆಸಿದ ಬಳಿಕ ಕಛೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಸ್ಥಳದಲ್ಲೆ ಇದ್ದ ಪಟ್ಟಣ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕೆಲ ಸಮಯದ ಬಳಿಕ ಬಿಡುಗಡೆಗೊಳಿಸಿದರು.

ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ, ಹಿರಿಯ ಹೋರಾಟಗಾರ ಶಾ.ಮುರಳಿ, ನಿಜಧ್ವನಿ ಗೋವಿಂದರಾಜು, ಚಾ.ರಾ.ಕುಮಾರ್ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು