News Karnataka Kannada
Wednesday, May 08 2024
ಚಾಮರಾಜನಗರ

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ನುಗ್ಗಿದ ಬಸ್

Chamarajanagar: A bus rammed into a lake in Chamarajanagar after the driver lost control of the vehicle.
Photo Credit : By Author

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ಕೆರೆಗೆ ನುಗ್ಗಿದ ಘಟನೆ ನಡೆದಿದ್ದು, ಚಾಲಕ ಮತ್ತು ನಿರ್ವಾಹಕರಿಗೆ ಗಾಯಗಳಾಗಿದ್ದು, ಅದೃಷ್ಟ ವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲ್ಲೂಕಿನ ಸಂತೇಮರಹಳ್ಳಿ ಬಳಿ ಭಾನುವಾರ ನಡೆದಿದೆ.

ಚಾಮರಾಜನಗರದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಸರಿ ಸುಮಾರು 50 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಸಂತೇಮರಹಳ್ಳಿ ಬಳಿ ಇರುವ ರೇಷ್ಮೆ ಮಾರುಕಟ್ಟೆ ಬಳಿ ಬರುತ್ತಿದ್ದಂತೆ ಬಸ್ ನಲ್ಲಿ ಶಬ್ದ ಕೇಳಿ ಬಂತು ಕೂಡಲೇ ಬಸ್ ನಿಯಂತ್ರಣ ಚಾಲಕನಿಗೆ ಸಿಗದೆ ಕೆರೆಯತ್ತ ನುಗ್ಗಿತು ಎಂದು ಪ್ರಯಾಣಿಕರು ಹೇಳಿದ್ದಾರೆ.

ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಇದ್ದಿದ್ದರಿಂದ ಯಾವುದೇ ಅಹಿತರ ಘಟನೆ ನಡೆಯಲಿಲ್ಲ. ಚಾಲಕ ಮಾದೇಶ್ ಮತ್ತು ಕಂಡಕ್ಟರ್ ಜ್ಯೋತಿ ರವರಿಗೆ ಪೆಟ್ಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಪ್ರಯಾಣಿಕರಿಗೆ ಕೆಲವರಿಗೆ ಅಲ್ಪ ಪ್ರಮಾಣದ ಪೆಟ್ಟಾಗಿದ್ದು, ಯಾವುದೇ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ.

ಸಂತೇಮರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಶಾಸಕ ಎನ್.ಮಹೇಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು