ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಯುವಕ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕುರುಟ್ಟಿ ಹೊಸೂರು ಗ್ರಾಮದ ಅಂಬರೀಶ್ (27) ಎಂಬ ಯುವಕನೇ ಸಾವಿನಲ್ಲೂ ಸಾರ್ಥಕತೆ ಮೆರೆದವನು. ಅಂಬರೀಶ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕುರಟ್ಟಿಹೊಸರು ಗ್ರಾಮದಲ್ಲಿ ಬೈಕ್ ಅಪಘಾತವಾಗಿ ಗಂಭಿರಗಾಯವಾದ ಹಿನ್ನಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸಿದೇ ಮೃತಪಟ್ಟಿದ್ದು, ಮೃತ ಅಂಬರೀಶ್ ನ ಕಣ್ಣುಗಳನ್ನು ಸಂಬಂಧಿಕರ ಒಪ್ಪಿಗೆಯಂತೆ ದಾನ ಮಾಡಿದ್ದಾರೆಂದು ತಿಳಿದು ಬಂದಿದೆ.
ತಮ್ಮ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಅಂಬರೀಶ್ ಅವರ ಬಯಕೆಯಾಗಿತ್ತು. ಅದರಂತೆ ನೇತ್ರದಾನ ಮಾಡಲಾಗಿದೆ ಎಂದು ಮೃತನ ಸ್ನೇಹಿತರು ತಿಳಿಸಿದ್ದಾರೆ.