ಚಾಮರಾಜನಗರ: ಐದು ವರ್ಷದ ಬಳಿಕ ಚಾಮರಾಜನಗರದಲ್ಲಿ ರಥೋತ್ಸವ

ಚಾಮರಾಜನಗರ:  ಆಷಾಢದಲ್ಲಿ ನಡೆಯುವ ಐತಿಹಾಸಿಕ ಶ್ರೀ ಕೆಂಪನಜಾಂಬ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿ ರಥೋತ್ಸವವು ಐದು ವರ್ಷಗಳ ಬಳಿಕ ಸಾವಿರಾರು ಭಕ್ತರ ಹರ್ಷೋದ್ಘಾರಗಳ ನಡುವೆ ಬುಧವಾರ ಸಡಗರ ಸಂಭ್ರಮದಿಂದ ನಡೆಯಿತು.

ಕಳೆದ ಐದು ವರ್ಷಗಳ ಬಳಿಕ ನಡೆದ ರಥೋತ್ಸವಕ್ಕೆ ಭಕ್ತರು ಖುಷಿಯಿಂದಲೇ ಆಗಮಿಸಿ, ಸುಂದರ ಕ್ಷಣಗಳನ್ನು ಕಣ್ತುಂಬಿಸಿಕೊಂಡರಲ್ಲದೆ, ನವವಿವಾಹಿತರು ಹಣ್ಣು ಧವನ ಎಸೆದು ಹರಕೆ ತೀರಿಸಿಕೊಂಡರು,

ರಥೋತ್ಸವವು ಕೊನೆಯ ಬಾರಿಗೆ 2016ರಲ್ಲಿ ನಡೆದಿತ್ತು. 2017ರ ಫೆಬ್ರವರಿಯಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಬ್ರಹ್ಮರಥಕ್ಕೆ ಬೆಂಕಿ ಹಾಕಿದ್ದರಿಂದ ಅದು ಸುಟ್ಟು ಹೋಗಿತ್ತು. ಆ ಬಳಿಕ ರಥೋತ್ಸವ ಸ್ಥಗಿತಗೊಂಡಿತ್ತು. ಐದು ವರ್ಷಗಳ ಬಳಿಕ ಹೊಸ ರಥ ನಿರ್ಮಾಣವಾಗುವುದರೊಂದಿಗೆ ಮತ್ತೆ ರಥೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಯಿತು.

ಈ ಬಾರಿಯ ರಥೋತ್ಸವಕ್ಕೆ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌  ಚಾಲನೆ ನೀಡಿದ್ದು ವಿಶೇಷವಾಗಿದೆ.  ಬೆಳಿಗ್ಗೆ 11ರಿಂದ 11.30ರ ಕನ್ಯಾಲಗ್ನದಲ್ಲಿ ಚಿನ್ನಾಭರಣ ಅಲಂಕೃತ ಶ್ರೀ ಚಾಮರಾಜೇಶ್ವರಸ್ವಾಮಿಯ ಉತ್ಸವ ಮೂರ್ತಿಯನ್ನು ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಯದುವೀರ್‌ ಅವರು ಉತ್ಸವ ಮೂರ್ತಿ, ರಥಕ್ಕೆ ಪೂಜೆ ಸಲ್ಲಿಸಿ, ತೆಂಗಿನಕಾಯಿಯನ್ನು ಹಿಡಿದು ಪ್ರಾರ್ಥನೆ ಸಲ್ಲಿಸಿ ಅರ್ಚಕರಿಗೆ ನೀಡಿದರು. ಆ ಬಳಿಕ ತೆಂಗಿನಕಾಯನ್ನು ಒಡೆದು ರಥವನ್ನು ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಇದೇ ವೇಳೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಸಿ.ಎಸ್. ನಿರಂಜನ್ ಕುಮಾರ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್,  ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಎಲ್ಲ ಕೋಮುಗಳ ಮುಖಂಡರು ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಚಾಮರಾಜೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ರಥ ಸಾಗುತ್ತಿದ್ದಂತೆಯೇ  ದೇವಸ್ಥಾನದ ಆವರಣದಲ್ಲಿ ಕಿಕ್ಕಿರಿದು ಸೇರಿದ್ದ ಭಕ್ತರು ಹಣ್ಣು ಧವಸ, ನಾಣ್ಯವನ್ನು ಎಸೆದು ಹರ್ಷೋದ್ಘಾರ ಮಾಡಿದರೆ,  ನೂರಾರು ಸಂಖ್ಯೆಯಲ್ಲಿ ನವ ದಂಪತಿಗಳು ನೆರೆದು ಹಣ್ಣು ಹೂವು ಎಸೆದು ತಮ್ಮ ಹರಕೆ ತೀರಿಸಿದರು.

ಶ್ರೀ  ಚಾಮರಾಜೇಶ್ವರಸ್ವಾಮಿಯ ರಥದ ಮುಂಭಾಗದಲ್ಲಿ ಮಹಾರಾಜರ ಉತ್ಸವಮೂರ್ತಿ, ಗಣಪತಿ ದೇವರು ಚಿಕ್ಕ ರಥಗಳಲ್ಲಿ ಸಾಗಿದರೆ ಹಿಂಭಾಗದಲ್ಲಿ ಕೆಂಪನಂಜಾಂಬ–ಪಾರ್ವತಿ ದೇವರ ರಥ ಸಾಗಿತು. ರಥವು ದೇವಸ್ಥಾನದ ಮುಂಭಾಗದಿಂದ ದಕ್ಷಿಣಾಭಿಮುಖವಾಗಿ ರಥದ ಬೀದಿ, ಎಸ್‌ಬಿಎಂ ರಸ್ತೆ, ವೀರಭದ್ರೇಶ್ವರಸ್ವಾಮಿ ದೇವಾಲಯದ ವೃತ್ತ, ಮಾರಮ್ಮ ದೇವಸ್ಥಾನದ ರಸ್ತೆ, ಹಳೆ ತರಕಾರಿ ಮಾರುಕಟ್ಟೆ ರಸ್ತೆಯಲ್ಲಿ ಸಾಗಿ ಮತ್ತೆ ದೇವಸ್ಥಾನದ ಮುಂಭಾಗ ತಲುಪಿತು. ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಮುಂಭಾಗದಿಂದ ಹೊರಟ ರಥ, ಮೂರು ಗಂಟೆ  ಸುಮಾರಿಗೆ ಮೂಲ ಸ್ಥಾನ ತಲುಪಿತು.

ರಥೋತ್ಸವಕ್ಕೂ ಮೊದಲು ದೇವಾಲಯದ ಒಳಾಂಗಣದಲ್ಲಿ ಚಾಮರಾಜೇಶ್ವರಸ್ವಾಮಿ ಉತ್ಸವ ಮೂರ್ತಿಕೆಂಪನಂಜಾಂಬಪಾರ್ವತಿ ದೇವರು ಹಾಗೂ ಮಹಾರಾಜರ ಉತ್ಸವಮೂರ್ತಿಗಳ ಉತ್ಸವನಡೆಯಿತುಭಕ್ತರು ಉತ್ಸವ ಮೂರ್ತಿಗಳನ್ನು ಹೊತ್ತುಕೊಂಡು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿದರುಭಾರಿ ಸಂಖ್ಯೆಯಲ್ಲಿ ಭಕ್ತರು ಸೇರುವ ನಿರೀಕ್ಷೆ ಇದ್ದುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಬಿಗಿ ಕ್ರಮ ಕೈಗೊಂಡಿತ್ತು. ಬಂದೋಬಸ್ತ್ ಗೆ  500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.   ಹಾಗಿದ್ದರೂರಥಕ್ಕೆ ಯದುವೀರ್‌  ಅವರು ಪೂಜೆ  ಸಲ್ಲಿಸುವ  ಸಂದರ್ಭದಲ್ಲಿ  ತಳ್ಳಾಟ ಉಂಟಾಗಿದ್ದರಿಂದ ಪೊಲೀಸರು ಲಾಠಿಯನ್ನೂ ಬೀಸಿ ತಹಬದಿಗೆ ತಂದರು.

ರಥೋತ್ಸವದಲ್ಲಿ ಭಾಗವಹಿಸಿದ್ದ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಮಾತನಾಡಿ ‘ಇದೇ ಮೊದಲ ಬಾರಿಗೆ ಈ ಉತ್ಸವಕ್ಕೆ ಬರು‌ತ್ತಿದ್ದೇನೆ. ಈ ಹಿಂದೆ ಬರಬೇಕು ಎಂದುಕೊಂಡಿದ್ದರೂ ಬರುವುದಕ್ಕೆ ಆಗಿರಲಿಲ್ಲ. ಈಗ ಬಂದಿರುವುದು ಖುಷಿ ತಂದಿದೆ. ರಥ ನಿರ್ಮಾಣ ಆಗದೇ ಇದ್ದುದರಿಂದ ಹಾಗೂ ಕೋವಿಡ್‌ ಕಾರಣಕ್ಕೆ ಐದು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ. ಈಗ ರಥ ನಿರ್ಮಾಣವಾಗಿದೆ. ಸಾಂಕ್ರಾಮಿಕ ರೋಗ ಕಡಿಮೆಯಾಗಿದೆ. ಇನ್ನು ಮುಂದೆ ಪ್ರತಿ ವರ್ಷ ಉತ್ಸವ ನಡೆಯಲಿದೆ ಎಂದರು.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

12 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

35 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

51 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago