News Karnataka Kannada
Tuesday, May 07 2024
ಚಾಮರಾಜನಗರ

ಚಾಮರಾಜನಗರ: ಸಿಎಂ ನರಸಿಂಹಮೂರ್ತಿ ಗೆ ಶಂಕರ್ ನಾಗ್ ಪ್ರಶಸ್ತಿ

Shankar
Photo Credit : By Author

ಚಾಮರಾಜನಗರ: ಗುಡ್ಡಗಾಡು ಪ್ರದೇಶದ ಕಂಚಿನ ಕಂಠದ ಜಾನಪದ ಧೀರ ಧ್ವನಿ ಗಾಯಕ ಎಂದೇ ಪ್ರಸಿದ್ಧಿ ಹೊಂದಿರುವ ಜಾನಪದ ಗಾಯಕ ಹಾಗೂ ರಂಗಕರ್ಮಿ ಸಿಎಂ ನರಸಿಂಹಮೂರ್ತಿ ಅವರಿಗೆ ಪ್ರತಿಷ್ಠಿತ ಶಂಕರ್ ನಾಗ್ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ರಂಗ ಪಯಣ ತಂಡ ಡಿ.26ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಶಂಕರ್ ನಾಗ್ ನಾಟಕೋತ್ಸವದಲ್ಲಿ ಇವರಿಗೆ  ಚಿತ್ರ ನಟರಾದ ರಮೇಶ್ ಭಟ್ ಮತ್ತು ಮಂಡ್ಯ ರಮೇಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಚಾಮರಾಜನಗರ ಗಡಿ ಜಿಲ್ಲೆಯಲ್ಲಿ ನಿರಂತರವಾಗಿ ಸಾಹಿತ್ಯ ಕಲೆ ಸಂಸ್ಕೃತಿ ಉಳಿಯುವುದಕ್ಕಾಗಿ ಶ್ರಮಿಸುತ್ತಿರುವ ಸಿಎಂ ನರಸಿಂಹಮೂರ್ತಿ ಅಮೆರಿಕಾದ ಅಕ್ಕ ಒಕ್ಕೂಟ ನಡೆಸುವ ವಿಶ್ವಕನ್ನಡ ಸಮ್ಮೇಳನ ಸೇರಿದಂತೆ ನೂರಾರು ಅಂತರಾಷ್ಟ್ರೀಯ ರಾಷ್ಟ್ರೀಯ ರಾಜ್ಯ ಮತ್ತು ಸ್ಥಳೀಯ ಸಾಹಿತ್ಯ ಸಮ್ಮೇಳನಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಿ ಜನ ಮೆಚ್ಚುಗೆ ಗಳಿಸಿದ್ದಾರೆ.

ಪ್ರತಿವರ್ಷ ಕನ್ನಡ ಸಾಹಿತ್ಯ ಸಂಗೀತ ಜಾನಪದ ರಂಗಭೂಮಿಗೆ ಸಂಬಂಧಿಸಿದಂತೆ ಉತ್ಸವಗಳನ್ನು ನಡೆಸುತ್ತಾರೆ. ಕನ್ನಡ ಜಾನಪದ ಸಾಹಿತ್ಯ ರಂಗಭೂಮಿ ಕ್ಷೇತ್ರಗಳಿಗೆ ಇವರು ನೀಡಿರುವ ಕೊಡುಗೆ  ಅನನ್ಯವಾದುದು. ಇವರಿಗೆ  ಕರ್ನಾಟಕ ಸರ್ಕಾರದ ರಾಜ್ಯ ಯುವ ಪ್ರಶಸ್ತಿ ಕರ್ನಾಟಕ ನಾಟಕ ಅಕಾಡೆಮಿ ಸಿಜಿಕೆ ಪ್ರಶಸ್ತಿ, ಮಂಟೇಸ್ವಾಮಿ ಪ್ರಶಸ್ತಿ, ದೂರದರ್ಶನ ಚಂದನ ಪ್ರಶಸ್ತಿ, ಎಸ್ ಕೆ ಕರೀಮ್ ಖಾನ್ ಪ್ರಶಸ್ತಿ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಸುಗಮ ಸಂಗೀತ ಪರಿಷತ್ತು ,ಕರ್ನಾಟಕ ರಂಗ ಪರಿಷತ್ತು ,ಕರ್ನಾಟಕ ಜಾನಪದ ಪರಿಷತ್ತು, ಭಾರತ ಯಾತ್ರ ಕೇಂದ್ರ ರಂಗವಾಹಿನಿ ಸಂಸ್ಥೆಗಳು ಇವರನ್ನು ಅಭಿನಂದಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು