News Karnataka Kannada
Friday, May 10 2024
ಚಾಮರಾಜನಗರ

ಚಾಮರಾಜನಗರ: ಡಿಜೆ ಹಾಕದಂತೆ ಸೂಚಿಸಿದ ಪೊಲೀಸರ ಮೇಲೆ ಹಲ್ಲೆ

Chamarajanagar: Cops attacked for asking them not to wear DJ
Photo Credit : By Author

ಚಾಮರಾಜನಗರ: ಗಣಪತಿ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ರಾತ್ರಿ 10 ಗಂಟೆ ಬಳಿಕ ಡಿಜೆ ಬಳಸದಂತೆ ಸೂಚಿಸಿದ ಪೊಲೀಸರ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಿ ಹಲ್ಲೆ ನಡೆಸಿರುವ ಘಟನೆ ನಗರದ ಉಪ್ಪಾರ ಬೀದಿಯಲ್ಲಿ ನಡೆದಿದೆ. ಘಟನೆಯಲ್ಲಿ ಪಟ್ಟಣ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ಮಹದೇವ್‌ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 15ಕ್ಕೂ ಹೆಚ್ಚು ಜನರ ಮೇಲೆ ‍ಪ್ರಕರಣ ದಾಖಲಿಸಿದ್ದು, ಐವರನ್ನು ಬಂಧಿಸಲಾಗಿದೆ.

ಉಪ್ಪಾರ ಬೀದಿಯ ಕೆ.ಟಿ.ನಾಗಶೆಟ್ಟಿ ಅವರ ನೇತೃತ್ವದಲ್ಲಿ ಮಂಟೇಸ್ವಾಮಿ ದೇವಾಲಯದ ಕೊಂಡ ಹಾಕುವ ಸ್ಥಳದಲ್ಲಿ ಗಣೇಶನ ವಿಗ್ರಹ ಪ್ರತಿಷ್ಠಾಪಿಸಲಾಗಿತ್ತು. ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ಮಹದೇವ್ ನೇತೃತ್ವದಲ್ಲಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ರಾತ್ರಿ 10.30ರ ಬಳಿಕವೂ ಸಂಘಟಕರು ಧ್ವನಿವರ್ಧಕದಲ್ಲಿ ಜೋರಾಗಿ ಹಾಡು ಹಾಕಿ ನೃತ್ಯ ಮಾಡುತ್ತಿದ್ದಾಗ ಮಹದೇವ್‌ ಅವರು, ‘ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಸಬಾರದು. ಧ್ವನಿ ವರ್ಧಕ, ಡಿಜೆ ಬಳಸಲು ಅನುಮತಿ ನೀಡಿಲ್ಲ. ಡಿಜೆ ನಿಲ್ಲಿಸಿ’ ಎಂದು ಸಂಘಟಕರಿಗೆ ಹೇಳಿದ್ದಾರೆ.

ಈ ವೇಳೆ ಆಕ್ರೋಶಗೊಂಡ ಕಿಡಿಗೇಡಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ಬಂದೋಬಸ್ತ್‌ ಕರ್ತವ್ಯದಲ್ಲಿದ್ದ ಎಎಸ್‌ಐ ಶಿವಶಂಕರ್‌ ಅವರು ಪಟ್ಟಣ‌ ಠಾಣೆಗೆ ದೂರು ನೀಡಿದ್ದಾರೆ. ಘಟನೆಯಲ್ಲಿ ಕಿಡಿಗೇಡಿಗಳು ಸಬ್‌ ಇನ್‌ಸ್ಪೆಕ್ಟರ್‌ ಮಹದೇವ್‌ ಅವರ ಮೇಲೆ ಕಲ್ಲು ಎಸೆದಿದ್ದು ಇದರಿಂದ ಅವರ ತಲೆಗೆ ಏಟಾಗಿದ್ದರೆ, ಜೀಪು ಚಾಲಕ ಬಸವರಾಜು ಅವರಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ 15ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್‌ ದಾಖಲಾಗಿಸಲಾಗಿದ್ದು, ಐವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು