ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕೇಂದ್ರವಾದ ನಗರದ ಹೊರವಲಯ ಬೇಡರಪುರದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಭೇಟಿ ಸಿದ್ದತೆಗಳನ್ನು ನೀಡಿ ಪರಿಶೀಲಿಸಿದರು.
ಮತ ಎಣಿಕೆಗೆ ಅಗತ್ಯವಾಗಿರುವ ಕೊಠಡಿಗಳಲ್ಲಿ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನ ವ್ಯಾಪಕವಾಗಿ ವೀಕ್ಷಿಸಿದರು. ವಿಧಾನಸಭಾ ಕ್ಷೇತ್ರವಾರು ಮತ ಎಣಿಕೆಗೆ ಟೇಬಲ್ ಗಳು, ಆಸನಗಳು ಸೇರಿದಂತೆ ಕೊಠಡಿಗಳಲ್ಲಿ ಅಳವಡಿಸುತ್ತಿರುವ ಇನ್ನಿತರ ವ್ಯವಸ್ಥೆಗಳನ್ನು ಪರಿಶೀಲಿಸಿ ಅಗತ್ಯ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದಲ್ಲಿ ಬಂದೋಬಸ್ತ್ ಸಂಬಂಧ ಪರಿಶೀಲಿಸಿದರು. ಕಾಲೇಜಿನ ಮುಖ್ಯ ದ್ವಾರದಿಂದಲೇ ಕೈಗೊಳ್ಳಬೇಕಿರುವ ಪೊಲೀಸ್ ಬಂದೋಬಸ್ತ್ ನಿಯೋಜನೆ ಸಂಬಂಧ ವೀಕ್ಷಣೆ ಮಾಡಿದರು. ಬ್ಯಾರಿಕೇಡ್ಗಳ ಅಳವಡಿಕೆ, ವಾಹನಗಳ ನಿಲುಗಡೆಗೆ ಸ್ಥಳವಕಾಶ, ಉಪಹಾರದ ಕೌಂಟರ್ ಸೇರಿದಂತೆ ಇನ್ನಿತರ ಅವಶ್ಯಕ ಸಿದ್ದತೆಗಳ ಬಗ್ಗೆ ವಿವರವಾಗಿ ಪರಿಶೀಲನೆ ಮಾಡಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಸಿ. ಕೆಂಪರಾಜು ಈ ಸಂದರ್ಭದಲ್ಲಿ ಇದ್ದರು.
ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್ ಕೇಸ್ಗೆ ಸಂಬಂಧಿಸಿದಂತೆ ಸಂತ್ರಸ್ತೆಯರು ಎಸ್ಐಟಿ ಬಳಿ ಭವಾನಿ ರೇವಣ್ಣರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನುವ…
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು…
ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕೇತ್ರಗಳಾದ ರಾಯ್ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರನ್ನು ನೇಮಕ ಮಾಡಿದೆ.
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಈಗಾಲೇ ಪೂರ್ಣಗೊಂಡಿದೆ. ಇತ್ತ ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ನಿರತವಾಗಿದೆ. ಮತ್ತೊಂದು ಕಡೆ ಐಪಿಎಲ್…
ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಿಟ್ಟಾಗಿ ಕಪಾಳಕ್ಕೆ ಹೊಡೆದಿದ್ದರಿಂದ ಮೃತಪಟ್ಟ ಘಟನೆ ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ ನಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು…