ಚಾಮರಾಜನಗರ: ಚಾಮರಾಜನಗರ ರಥದ ಬೀದಿಯಲ್ಲಿನ ಶ್ರೀ ಗುರುನಂಜಶೆಟ್ಟರ ಛತ್ರದ ಮುಂಭಾಗ ಶ್ರೀ ವಿದ್ಯಾಗಣಪತಿ ಮಂಡಲಿ ಪ್ರತಿಷ್ಠಾಪಿಸಿರುವ ಗಣಪತಿಯನ್ನು ವಿಸರ್ಜನೋತ್ಸವ ಶನಿವಾರ ನಡೆಯಲಿದೆ.
ಶನಿವಾರ ಬೆಳಗ್ಗೆ ಧಾರ್ಮಿಕ ಕೈಂಕರ್ಯಗಳನ್ನೊಂದಿಗೆ ವಿಸರ್ಜನಾ ಮೆರವಣಿಗೆ ನಡೆಯಲಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿದೆ. ಜಿಲ್ಲಾಡಳಿತ ಈಗಾಗಲೇ ಅ.23 ರ ಬೆಳಗ್ಗೆ ತನಕ ಮದ್ಯಪಾನವನ್ನು ಚಾಮರಾಜನಗರದ 10 ಕಿ.ಮೀ ಸುತ್ತ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಶುಕ್ರವಾರ ಸಂಜೆ ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯ ಮುಂಭಾಗದಿಂದ ಪೊಲೀಸ್ ಪಥ ಸಂಚಲನ ನಡೆಸಲಾಯಿತು.
ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಸುಮಾರು ಸಾವಿರಕ್ಕೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುದ್ದು, ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು ಅಳವಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಮಂದಿಯನ್ನು ವಿಚಾರಣೆ ನಡೆಸಲಾಗಿದ್ದು, ಯಾರನ್ನು ವಶಕ್ಕೆ ಪಡೆದಿಲ್ಲ ಹಾಗೂ ಆಯಾ ಕೋಮಿನ ಮುಖಂಡರಿಗೆ ಮೆರವಣಿಗೆ ವೇಳೆ ಶಾಂತಿ ಕಾಪಾಡುವ ಹೊಣೆ ನೀಡಲಾಗಿದ್ದು, ಶಾಂತಿಯುತ ಗಣಪತಿ ವಿಸರ್ಜನೆ ನಡೆಯಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಹೇಳಿದರು.