ಚಾಮರಾಜನಗರ: ಪಂಥಾತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರತಿ ಕೆಲಸಕ್ಕೂ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಭಿಕ್ಷಾ ಪಾತ್ರೆ ಹಿಡಿದು ಧರಣಿ ನಡೆಸಿದರು.
ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ ರೋಡ್ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ ಎಂದು ಆರೋಪಿಸಿ ಜಿ.ಪಂ ಸದಸ್ಯ ಅರುಣ್ ಸೆಲ್ವಂ ಧರಣಿ ನಡೆಸಿದರು. ಕಾಮಗಾರಿ ನಡೆಸಲು ಪಿಡಿಒ ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.
ಹನೂರು ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಮಾರ್ಟಳ್ಳಿ ಗ್ರಾ.ಪಂ. ರಸ್ತೆ, ಕುಡಿವ ನೀರು, ವಿದ್ಯುತ್ , ಚರಂಡಿ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಇಲ್ಲದೇ ಇರುವುದರಿಂದ ವಾರ್ಡ್ ನಲ್ಲಿ ಸಮಸ್ಯೆಗಳಾಗುತ್ತಿವೆ ಎಂದು ಜಿ.ಪಂ.ಸದಸ್ಯರು ಆರೋಪಿಸಿದರು. ಪಿಡಿಒಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಎಲ್ಲ ಕೆಲಸಗಳಿಗೂ ಲಂಚ ಕೇಳುತ್ತಾರೆ. ನಾವು ಎಲ್ಲಿ ಹಣ ಕೊಡುತ್ತೇವೆ ಎಂದು ಬಾಯಿಗೆ ಬಟ್ಟೆ ಕಟ್ಟಿಕೊಂಡು ಅರುಳಸೆಲ್ವಂ ಆಕ್ರೋಶ ವ್ಯಕ್ತಪಡಿಸಿದರು.
ಭಿಕ್ಷೆ ಎಂಬ ಡಬ್ಬಿ ಹಿಡಿದು ಬಾಯಿಗೆ ಬಟ್ಟೆ ಕಟ್ಟಿಕೊಂಡು ಪ್ರಾಮಾಣಿಕತೆಗೆ ಪ್ರತಿಫಲ ಎಂಬ ಭಿತ್ತಿಪತ್ರ ಹಿಡಿದ ಜಿ.ಪಂ.ಸದಸ್ಯರು, ನನ್ನ ವಾರ್ಡಿನ ಅಭಿವೃದ್ಧಿ ಕಾಮಗಾರಿಗೆ ಲಂಚ ಕೊಡಬೇಕು ಎಂದು ಗ್ರಾಮಸ್ಥರ ಬಳಿ ಭಿಕ್ಷೆ ಬೇಡುತ್ತಿದ್ದಾರೆ ಎಂದು ಪೋಸ್ಟರ್ ನಲ್ಲಿ ತಿಳಿಸಿದ್ದಾರೆ.
ಭ್ರಷ್ಟಾಚಾರ ಮಧುಮೇಹ ಇದ್ದಂತೆ. ಇದು ನಮ್ಮನ್ನು ಮತ್ತು ನಮ್ಮ ಸಮುದಾಯವನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ. ಕರ್ತವ್ಯ ನಿರ್ವಹಿಸಲು ಲಂಚ ಕೊಡಬೇಕಾದ ಪರಿಸ್ಥಿತಿ ನಮ್ಮ ದೇಶದಲ್ಲಿದೆ. ನಮ್ಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ.
ಕಳೆದ ಎರಡು ವರ್ಷಗಳಲ್ಲಿ 15ನೇ ಹಣಕಾಸು ಮತ್ತು ಎಂಎನ್ಆರ್ಇಜಿಎಸ್ ಅಡಿಯಲ್ಲಿ ನಡೆದಿರುವ ಕಾಮಗಾರಿಗಳ ತನಿಖೆ ನಡೆಸುವಂತೆ ಜಿ.ಪಂ.ಸದಸ್ಯರು ಸರಕಾರವನ್ನು ಒತ್ತಾಯಿಸಿದರು. ಕುಡಿವ ನೀರಿನ ಪೈಪ್, ವಿದ್ಯುತ್ ಬಲ್ಬ್ ಕಡಿಮೆ ಬೆಲೆಗೆ ದೊರೆಯುತ್ತಿದ್ದು, ಹೆಚ್ಚಿನ ಬೆಲೆ ನೀಡಿ ಲಕ್ಷಗಟ್ಟಲೆ ಹಣ ಲೂಟಿ ಮಾಡಿದ್ದಾರೆ.. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ತನಿಖೆ ನಡೆಸಬೇಕು ಎಂದು ಅರುಳಸೆಲ್ವಂ ಆಗ್ರಹಿಸಿದ್ದಾರೆ.
ಮಾರ್ಟಳ್ಳಿ ಗ್ರಾ.ಪಂ.ಪಿಡಿಒ ಗಂಗಾಧರ್ ಮಾತನಾಡಿ, ಲಂಚದ ಆರೋಪ ಸತ್ಯಕ್ಕೆ ದೂರವಾದುದಾಗಿದ್ದು, ನಲ್ ರೋಡ್ ವಾರ್ಡ್ ನ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ನಾವು ಸಿದ್ಧರಿದ್ದೇವೆ ಎಂದರು. ಆದರೆ ಅವರು ಕಾಮಗಾರಿ ಪಟ್ಟಿ ಮಾಡಿದರೆ ಮುಂದಿನ ದಿನಗಳಲ್ಲಿ ಕ್ರಿಯಾ ಯೋಜನೆ ರೂಪಿಸುತ್ತೇವೆ.