News Karnataka Kannada
Sunday, May 05 2024
ಚಾಮರಾಜನಗರ

ಚಾಮರಾಜನಗರ: ಎಸಿಬಿ ಬಲೆಗೆ ಬಿದ್ದ ಆರೋಗ್ಯ ಇಲಾಖೆಯ ನೌಕರ

Health department employee caught by ACB
Photo Credit : By Author

ಚಾಮರಾಜನಗರ: ಸಂಬಳ ಮತ್ತು ವರ್ಕ್ ಆರ್ಡರ್ ಕೊಡಲು ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಆರೋಗ್ಯ ಇಲಾಖೆ ನೌಕರ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರದ  ಜಿಲ್ಲಾಡಳಿತ ಭವನದ ಡಿಎಚ್‌ಒ ಕಚೇರಿಯಲ್ಲಿ ನಡೆದಿದೆ.

ಡಿಎಚ್‌ಒ ಕಚೇರಿಯ ಪ್ರಥಮ ದರ್ಜೆ ಸಹಾಯಕ ಮಹೇಶ್ ಎಂಬಾತ ಎಸಿಬಿ ಬಲೆಗೆ ಬಿದ್ದ ನೌಕರ. ಈತ ಕೊಳ್ಳೇಗಾಲದ ವ್ಯಕ್ತಿಯೊಬ್ಬರಿಗೆ ಮೂರು ತಿಂಗಳ ವೇತನ ಮತ್ತು ಕೆಲಸದ ಬಗ್ಗೆ ಆದೇಶ  ನೀಡಲು ಸತಾಯಿಸಿ ಕೊನೆಗೆ 5 ಸಾವಿರ ರೂ.ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಂದು ಹೇಳಲಾಗಿದೆ.

ಈ ಬಗ್ಗೆ ಕೊಳ್ಳೇಗಾಲದ ವ್ಯಕ್ತಿಯು ಎಸಿಬಿಗೆ ದೂರು ನೀಡಿದ್ದು, ವ್ಯಕ್ತಿಯ ದೂರಿನ ಮೇರೆಗೆ ಎಸಿಬಿ ಡಿವೈಎಸ್ಪಿ ಸದಾನಂದ ತಿಪ್ಪಣ್ಣನವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 3 ಸಾವಿರ ಹಣ ಪಡೆಯುವಾಗ ಮಹೇಶ್ ಅವರನ್ನು ಬಂಧಿಸಿದ್ದಾರೆ. ಹಣ ಮತ್ತು ಮಹೇಶ್ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು