ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಾದಪ್ಪನ ಸನ್ನಿಧಿಯಲ್ಲಿ ಜು.14 ರಿಂದ ಆ.22ರವರೆಗಿನ ಅವಧಿಯ ಸುಮಾರು 40 ದಿನಗಳಲ್ಲಿ ಸಂಗ್ರಹವಾದ ಕಾಣಿಕೆ ಹುಂಡಿಯನ್ನು ಎಣಿಕೆ ಮಾಡಲಾಯಿತು.
ಶ್ರೀ ಮಲೆ ಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕಿರಣದಲ್ಲಿ ಸಾಲೂರು ಬೃಹನ್ಮಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಪೊಲೀಸ್ ಬಂದೋಬಸ್ತ್ ಮತ್ತು ಸಿಸಿ ಕ್ಯಾಮರಾ ಅಳವಡಿಸಿರುವ ವಾಣಿಜ್ಯ ಸಂಕೀರ್ಣದಲ್ಲಿ ಎಣಿಕೆ ಕಾರ್ಯ ಆರಂಭಿಸಲಾಯಿತು. ಎಣಿಕೆ ವೇಳೆ ಹುಂಡಿಯಲ್ಲಿ 2,00,16,,340 ಕೋಟಿ ರೂಪಾಯಿ ಹಾಗೂ 2.342ಕೆಜಿ.ಬೆಳ್ಳಿ, 50ಗ್ರಾಂ ಚಿನ್ನ ಸಂಗ್ರಹವಾಗಿದೆ.
ಕಾಣಿಕೆ ಹಣದ ಎಣಿಕೆ ಕಾರ್ಯದಲ್ಲಿ ಶ್ರೀ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಕ್ಯಾತಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು, ಲೆಕ್ಕಾಧೀಕ್ಷಕರಾದ ಪ್ರವೀಣ್ ಪಟೀಲ್, ಜಿಲ್ಲಾಧಿಕಾರಿ ಕಚೇರಿಯ ಪ್ರಥಮದರ್ಜೆ ಸಿಬ್ಬಂದಿ ಸಚಿನ್, ಮಹದೇವಸ್ವಾಮಿ, ನಾಗರಾಜ್, ಮಾದೇಶ್, ಮಲ್ಲಿಕಾರ್ಜುನಪ್ಪ, ಎಸ್ ಬಿಐ ಬ್ಯಾಂಕ್ ನೌಕರರು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.