ಚಾಮರಾಜನಗರ: ಅಂತರ ರಾಜ್ಯ ಕಳ್ಳಿಯರನ್ನು ಪತ್ತೆ ಹಚ್ಚಿದ ಜಿಲ್ಲೆಯ ಕೊಳ್ಳೇಗಾಲ ಪಟ್ಟಣ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತರಿಂದ 7.50 ಲಕ್ಷರೂ ಮೌಲ್ಯದ 151 ಚನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ತಮಿಳುನಾಡಿನ ಸೇಲಂ ಜಿಲ್ಲೆಯ ವಸಂತ ಹಾಗೂ ಧನಂ ಎಂಬ ಮಹಿಳೆಯರು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ವೈವಿದ್ಯ ಜ್ಯುವೆಲ್ಲ ರ್ಸ್ ನಲ್ಲಿ ನಕಲಿ ಚಿನ್ನವನ್ನು ನೀಡಿ ಅಂಗಡಿಯಿಂದ 71.6 ಚಿನ್ನವನ್ನು ಪಡೆದು ಮೋಸ ಮಾಡಿದ್ದ ಬಗ್ಗೆ ದೂರು ದಾಖಲಾಗಿತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸೇಲಂ ಪಟ್ಟಣದಲ್ಲಿ ಆರೋಪಿಗಳನ್ನು ಬಂಧಿಸಿ 7.50 ಲಕ್ಷರೂ ಮೌಲ್ಯದ 151 ಗ್ರಾಂ ಚಿನ್ನಾಭರಣವನ್ನು ಜಪ್ತಿಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತ ಆರೋಪಿಗಳಿಬ್ಬರ ಮೇಲೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ಹಾಗೂ ಮೈಸೂರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.