ಚಾಮರಾಜನಗರ: ಚಿರತೆಯೊಂದು ಬಾಲಕನ ಮೇಲೆ ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ 8 ಗಂಟೆ ವೇಳೆಯಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಲ್ಲಿಗಹಳ್ಳಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಲ್ಲಿಗಹಳ್ಳಿ ಗ್ರಾಮಕ್ಕೆ ಮಂಗಳವಾರ ರಾತ್ರಿ ಎಂಟು ಗಂಟೆ ವೇಳೆಗೆ ಹಠಾತ್ತಾಗಿ ಆಗಮಿಸಿದ ಚಿರತೆ ಹರ್ಷಿತ್’ನ ಮೇಲೆ ದಾಳಿ ನಡೆಸಿ ಹೊಟ್ಟೆ ಮುಖಕ್ಕೆ ಪರಚಿದೆ .
ಶಿವಕುಮಾರ್ ಮೇಘನಾ ಪುತ್ರ ಹರ್ಷಿತ್, ತಾತಾನ ಮನೆಯಿಂದ ತಮ್ಮ ಮನೆಗೆ ತೆರಳುವಾಗ ಘಟನೆ ನಡೆದಿದ್ದು, ಗಾಯಗೊಂಡ ಬಾಲಕನನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಜ್ಜಾಗಿದೆ ಎಂದು ತಿಳಿದು ಬಂದಿದೆ.