ಚಾಮರಾಜನಗರ: ಮದುವೆಯಾದ ಐದೇ ದಿನಕ್ಕೆ ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ವ್ಯಕ್ತಿಯೊಬ್ಬ ಮದುವೆಯಾದ ಐದೇ ದಿನಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾನಗರ ಜಿಲ್ಲೆಯ ಕೊಳ್ಳೇಗಾಲದ ಜಿ.ಪಿ.ಮಲ್ಲಪ್ಪಪುರಂನಲ್ಲಿ ನಡೆದಿದ್ದು, ಈ ಪ್ರಕರಣ ಅನುಮಾನವನ್ನು ಹುಟ್ಟು ಹಾಕಿದ್ದು, ಪತ್ನಿ ಈ ಸಂಬಂಧ ದೂರು ನೀಡಿದ್ದಾರೆ.

ಜಿ.ಪಿ.ಮಲ್ಲಪ್ಪಪುರಂ ನಿವಾಸಿ ಸತೀಶ್‌ ಬಾಬು (43)  ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನು. ಈತ ಐದು ದಿನಗಳ ಹಿಂದೆ ಮೈಸೂರು ಜಿಲ್ಲೆ ತಿ.ನರಸಿಪುರ ತಾಲ್ಲೂಕಿನ ಕನ್ನಹಳ್ಳಿ ಗ್ರಾಮದ ಚೆನ್ನಾಜಮ್ಮ ಅವರನ್ನು ಅದ್ಧೂರಿಯಾಗಿ ವಿವಾಹವಾಗಿದ್ದನು. ಇದಾದ ಮೂರು ದಿನಗಳ ಬಳಿಕ ತನಗೆ ಅನಾರೋಗ್ಯ ಇರುವುದರಿಂದ ಯಾವುದೇ ಸಂಪ್ರದಾಯ, ಆಚರಣೆಗಳು ಬೇಡ ಎಂದು ಸತೀಶ್‌ ಬಾಬು ಹೇಳಿದ್ದನು. ಕೃಷಿಕನಾಗಿದ್ದ ಈತ ಪ್ರತಿದಿನ ಎಂದಿನಂತೆ ಕೆಲಸ ಮಾಡುತ್ತಿದ್ದನು. ಆದರೆ ಭಾನುವಾರ ಬೆಳಿಗ್ಗೆ ಜಮೀನಿಗೆ ಹೋಗಿದ್ದವನು ಅಲ್ಲಿಂದ ಮನೆಗೆ ಹಿಂತಿರುಗಿ ಮನೆಯ ಕೊಠಡಿಗೆ ಹೋಗಿ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ.

ಈ ಸಾವಿನ ಹಿಂದೆ ನನಗೆ ಅನುಮಾನಗಳಿವೆ. ನನ್ನ ಗಂಡನ ಸಾವಿಗೆ ಅವರ ತಂದೆ ಲಿಂಗರಾಜು, ತಾಯಿ ಮಹದೇವಿ, ಸಂಬಂಧಿಕರಾದ ದೇವಾನಂದ್,  ಪ್ರಕಾಶ್, ವಿಜಯಕುಮಾರ್ ಕಾರಣ. ಹಾಗಾಗಿ, ಅವರ ಮೇಲೆ ತನಿಖೆ ನಡೆಸಿ ನನಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಸತೀಶ್‌ ಬಾಬು ಪತ್ನಿ ಚೆನ್ನಾಜಮ್ಮ ಪೊಲೀಸರಿಗೆ ದೂರು ನೀಡಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago