News Karnataka Kannada
Wednesday, May 01 2024
ಚಾಮರಾಜನಗರ

ಚಾಮರಾಜನಗರ: ರಾಜ್ಯದಲ್ಲಿನ ಮಳೆಗೆ ಮೆಟ್ಟೂರು ಜಲಾಶಯ ಭರ್ತಿ

Centre approves Kalasa-Banduri project
Photo Credit :

ಚಾಮರಾಜನಗರ:  ರಾಜ್ಯದ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳು ಭರ್ತಿಯಾಗಿನದಿಗೆ ಹೆಚ್ಚುವರಿ ನೀರು ಬಿಡುತ್ತಿರುವುದರಿಂದ ನೆರೆಯ ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯಾಗಿದೆ.

ಸಾಮಾನ್ಯವಾಗಿ ಅಕ್ಟೋಬರ್‌ ನವೆಂಬರ್‌ ಅವಧಿಯಲ್ಲಿ ಭರ್ತಿಯಾಗುತ್ತಿದ್ದ ಜಲಾಶಯ ಈ ಬಾರಿ ಜುಲೈನಲ್ಲೇ ತುಂಬಿದ್ದು, ಇದರಿಂದ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತಮಿಳುನಾಡಿನ ಪಾಲಿನ ನೀರಿಗಿಂತಲೂ ಹೆಚ್ಚಿನ ನೀರು ಹರಿದು ಹೋಗುತ್ತಿದೆ.

ಈಗಾಗಲೇ ಜಲಾಶಯದ 16 ಗೇಟ್‌ಗಳಿಂದಲೂ ನೀರು ನದಿಗೆ ಬಿಡಲಾಗುತ್ತಿದೆ. 120 ಅಡಿಗಳಷ್ಟು ಗರಿಷ್ಠ ಮಟ್ಟ ಹೊಂದಿರುವ ಮೆಟ್ಟೂರು ಜಲಾಶಯವು 93.4 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ.

ಮೂರು ದಿನಗಳಲ್ಲಿ ಜಲಾಶಯಕ್ಕೆ 15 ಅಡಿಗಳಷ್ಟು ನೀರು ಹರಿದು ಬಂದಿದೆ. ಬುಧವಾರ ಅಣೆಕಟ್ಟೆಯ ನೀರಿನ ಮಟ್ಟ 105.810 ಅಡಿಗಳಷ್ಟಿತ್ತು. ಶನಿವಾರ ಬೆಳಿಗ್ಗೆ ನೀರಿನ ಮಟ್ಟ 120 ಅಡಿ  ತಲುಪಿದೆ. ಜಲಾಶಯದ ಒಳಹರಿವು 1.15 ಲಕ್ಷ ಕ್ಯುಸೆಕ್‌ ನಷ್ಟಿದೆ. 50 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ತಮಿಳುನಾಡಿನ ಜಲಾಶಯಗಳು ಭರ್ತಿಯಾಗುತ್ತಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು