ಚಾಮರಾಜನಗರ: ಶಾಸಕ ‌ಎನ್. ಮಹೇಶ್ ವಿರುದ್ಧ ಎ.ದೇವರಹಳ್ಳಿ ಜನರ ಆಕ್ರೋಶ

ಚಾಮರಾಜನಗರ: ಮಳೆಯಿಂದಾಗಿ ಯಳಂದೂರು ತಾಲೂಕಿನ ಎ.ದೇವರಹಳ್ಳಿಯಲ್ಲಿ ರಸ್ತೆಯೇ ಕೊಚ್ಚಿ ಹೋಗಿ ಹಲವು ರೀತಿಯ ಸಮಸ್ಯೆ ಎದುರಾಗಿದ್ದರೂ ಶಾಸಕ ಎನ್.ಮಹೇಶ್ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಆಗಸ್ಟ್ ನಲ್ಲಿ ನಿರಂತರ ಮಳೆಯಿಂದಾಗಿ ಉಂಟಾದ ಪ್ರವಾಹದಿಂದಾಗಿ ಹೇಗೋ ಗ್ರಾಮದ ರಸ್ತೆ ಕೊಚ್ವಿ ಹೋಗಿ ಹಾಳಾಗಿದೆ. ಇದರಿಂದ ಸಾರ್ವಜನಿಕರು ಓಡಾಡಲು ತೊಂದರೆಯಾಗಿದೆ ಎಂಬುದು ಗ್ರಾಮಸ್ಥರ ಆಕ್ರೋಶವಾಗಿದೆ.

ಇನ್ನು ಪ್ರತಿಭಟನೆಯಲ್ಲಿ ಭಾಗವಹಿಸಿದ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕಮಲ್ ನಾಗರಾಜ್ ಮಾತನಾಡಿ. ಗ್ರಾಮದ ಕೆಲವು ಮುಖಂಡರು ಗ್ರಾಮದ ಸಮಸ್ಯೆ ಹೊತ್ತು ಶಾಸಕ ಎನ್ ಮಹೇಶ್ ಮನೆಗೆ ಹೋಗಿ ಗ್ರಾಮ ಸಮಸ್ಯೆ ಹೇಳಿಕೊಂಡಾಗ ಶಾಸಕ ಎನ್ ಮಹೇಶ್ ರವರು ರಸ್ತೆ ಏನು ಚಾಪೆನಾ… ನಾ ತಂದು ಹಾಸುಬಿಡ್ಲಾ.. ಎಂದು ಬೇಜವಾಬ್ಧಾರಿ ಮಾತುಗಳನ್ನಾಡಿದ್ದಾರೆ ಎಂದು ದೂರಿದರು.

ಗ್ರಾಮಸ್ಥ ರಾಜಶೇಖರ ಮಾತಾನಾಡಿ ಈ ರಸ್ತೆಯಲ್ಲೇ ಮಕ್ಕಳು, ವಿದ್ಯಾರ್ಥಿಗಳು ವಯಸ್ಸಾದ ವೃದ್ದರು ಗರ್ಭಿಣಿಯರು ಓಡಾಡಬೇಕಾಗಿದೆ. ಆದರೆ‌ ಈ ಢಕ್ ಮಾಡದೆ ಯಾವ ವಾಹನಗಳು ನಮ್ಮ ಗ್ರಾಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಅಳಲು ತೋಡಿಕೊಂಡರು.

ಗ್ರಾಮಸ್ಥರ ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ದೌಡಯಿಸಿದ ಜಿಪಂ ಎ.ಇ.ಇ ಹರೀಶ್ ಕುಮಾರ್ ಅವರು ಸದ್ಯಕ್ಕೆ ಜನರು ಓಡಾಡಲು ತಾತ್ಕಾಲಿಕವಾಗಿ ಪೈಪ್ ಗಳನ್ನು ಹಾಕಿ ಸಾರ್ವಜನಿಕರಿಗೆ ಅನುಕೂಲ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ದೇವರಳ್ಳಿ ಗ್ರಾಮದ ರಸ್ತೆ ಮತ್ತು ಡಕ್ ಕಾಮಗಾರಿಯನ್ನು ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಿ.ಎಸ್ಪಿ ಮುಖಂಡ ರಾಜಪ್ಪ, ಪಂಚಾಯಿತಿ ಸದಸ್ಯ ನಾಗೇಂದ್ರ, ಗ್ರಾಮದ ಹಿರಿಯ ಮುಖಂಡರಾದ ಮಹದೇವಪ್ಪ, ರಾಜಶೇಖರ, ವಕೀಲ ರಾಜೇಂದ್ರ, ಅಗ್ರಹಾರ ರಜನಿಕಾಂತ್, ರೈತ ಸಂಘದ ನಾಗರಾಜು, ಸೋಮಣ್ಣ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Gayathri SG

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

5 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

13 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

29 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

36 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

54 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

59 mins ago