News Karnataka Kannada
Saturday, April 27 2024
ಚಾಮರಾಜನಗರ

ಚಾಮರಾಜನಗರ: ಗಂಡಾನೆಗಳ ಕಾಳಗದಲ್ಲಿ ಒಂದು ಆನೆ ಸಾವು

Chamarajanagar: One elephant killed in male fight
Photo Credit : News Kannada

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿ ಗ್ರಾಮದ ದೊಡ್ಡ ಮಾಕಳಿ ಅರಣ್ಯ ಪ್ರದೇಶದಲ್ಲಿ ಎರಡು ಗಂಡಾನೆಗಳ ನಡುವೆ ನಡೆದ ಕಾಳಗದಲ್ಲಿ ಒಂದು ಆನೆ ಮೃತಪಟ್ಟಿದೆ.

ಮೃತಪಟ್ಟ ಆನೆಗೆ ೧೮ ರಿಂದ ೨೦ ವರ್ಷವಾಗಿದ್ದು, ಎರಡು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಎರಡು ಮೂರು ದಿನಗಳ ಹಿಂದೆ ಆನೆಗಳ ಕೂಗಾಟ ಹೆಚ್ಚಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮೃತಪಟ್ಟ ಆನೆಯ ಹೊಟ್ಟೆ ಮತ್ತು ಕತ್ತಿನ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಇನ್ನೊಂದು ಆನೆಯು ದಂತದಿಂದ ತಿವಿದಿದೆ. ಆನೆಯು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ ಎಂದು ಪಶುವೈದ್ಯ ಶಿವಕುಮಾರ್ ತಿಳಿಸಿದ್ದಾರೆ. ದೊಡ್ಡಮಾಕಳಿ ಅರಣ್ಯ ಪ್ರದೇಶದ ಸಿಬ್ಬಂದಿ ಬೀಟ್‌ಗೆ ಹೋಗಿದ್ದ ಸಂದರ್ಭದಲ್ಲಿ ಆನೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಸಂತೋಷ್ ಕುಮಾರ್, ಎಸಿಎಫ್ ಶಶಿಧರ್, ಆರ್‌ಎಫ್‌ಒ ಭರತ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿನೆ ನಡೆಸಿದರು. ಆನೆಯ ದಂತವನ್ನು ತೆಗೆದು, ಮರಣೋತ್ತರ ಪರೀಕ್ಷೆ ನಡೆಸಿ, ನಿಯಮಾನುಸಾರ ಕಳೇಬರವನ್ನು ವಿಲೇವಾರಿ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು